ಕೋಲಾರ :ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಎಣ್ಣೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಪೊಲೀಸ್ ಪೇದೆಗಳು ಠಾಣೆಯಲ್ಲಿಯೇ ಎಣ್ಣೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಸಂಬಂಧ ಕೋಲಾರದ ಎಸ್ಪಿ ಡಿ ದೇವರಾಜ್ ಅವರು ಪೇದೆಗಳಾದ ಆಂಜಿ, ಚಲಪತಿ, ಮಂಜುನಾಥ್ ಎಂಬುವರನ್ನು ಅಮಾನತುಗೊಳಿಸಿದ್ದಾರೆ. ಜೊತೆಗೆ ವಿಡಿಯೋ ಮಾಡಿದ್ದ ಪೊಲೀಸ್ ಪೇದೆ ರಮೇಶ್ ಬಾಬು ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.