ಕರ್ನಾಟಕ

karnataka

By

Published : Dec 6, 2019, 4:13 AM IST

ETV Bharat / state

ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್  'ಪಂಚ್​' ಜಾಗೃತಿ

ಏಡ್ಸ್ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಯೋಜಕತ್ವದಲ್ಲಿ ನಗರದ ವಿವಿಧ ಸಂಘ, ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು.

ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್
ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್

ಕೊಪ್ಪಳ/ಗಂಗಾವತಿ :ಏಡ್ಸ್ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಯೋಜಕತ್ವದಲ್ಲಿ ನಗರದ ವಿವಿಧ ಸಂಘ, ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು.

ಈ ವೇಳೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗವಹಿಸಿ ಮಾತನಾಡಿದರು. ಇಂದಿನ ಶಿಕ್ಷಣದಲ್ಲಿ ಪ್ರೌಢಶಾಲೆ ಹಂತದಿಂದಲೇ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕು. ಲೈಗಿಕತೆ, ಕಾಂಡೋಮ್​ ಬಳಕೆ ಹಾಗೂ ಏಡ್ಸ್​ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಏಡ್ಸ್​ ತಡೆಗಟ್ಟಲು ನೆರವಾಗಬೇಕು ಎಂದು ನೆರೆದಿದ್ದ ಜನರನ್ನು ನಗಿಸುತ್ತಲೇ ಪ್ರಾಣೇಶ್ ತಮ್ಮ ಹಾಸ್ಯದಾಟಿಯ ಭಾಷಣದಲ್ಲಿ ಜನರಿಗೆ ಏಡ್ಸ್ ಕುರಿತಾಗಿ ಸಂದೇಶವನ್ನು ನೀಡಿದರು.

ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್

ಈ ವೇಳೆ ಜಿಲ್ಲಾಧಿಕಾರಿ ಸುನಿಲ್ ಕುಮಾರ, ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ನ್ಯಾಯಾಧೀಶರಾದ ಆರ್.ಎಂ. ನಧಾಪ್, ಅನಿತಾ, ಗಾಯತ್ರಿ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ABOUT THE AUTHOR

...view details