ಕೊಪ್ಪಳ: ಮಾಸಿಕ ಗೌರವಧನ ₹ 12 ಸಾವಿರ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಅಶೋಕ ಸರ್ಕಲ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬೇಡಿಕೆಗಳು ಈಡೇರದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ - ಕೊಪ್ಪಳ ಜಿಲ್ಲಾ ಸುದ್ದಿ
ಮಾಸಿಕ ಗೌರವ ಧನ ₹ 12 ಸಾವಿರ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಪ್ಪಳದ ಅಶೋಕ ಸರ್ಕಲ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
![ಬೇಡಿಕೆಗಳು ಈಡೇರದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ ASHA_WORKERS_PROTEST](https://etvbharatimages.akamaized.net/etvbharat/prod-images/768-512-8019491-20-8019491-1594717699803.jpg)
ಅಶಾ ಕಾರ್ಯಕರ್ತೆಯರ ಪ್ರತಿಭಟನೆ
ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಬಾರಿ ಪ್ರತಿಭಟನೆ ಮೂಲಕ ಆಗ್ರಹಿಸಲಾಗಿದೆ. ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ, ಜನಪ್ರತಿನಿಧಿಗಳ ಮೂಲಕವೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಈ ಬಗ್ಗೆ ಈವರೆಗೆ ಗಮನ ಹರಿಸಿಲ್ಲವೆಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ. ಸುರಕ್ಷತಾ ಪರಿಕರಗಳ ಜೊತೆಗೆ ಮಾಸಿಕ ಗೌರವ ಧನ ₹ 12 ಸಾವಿರ ನೀಡಬೇಕು. ಇಲ್ಲವಾದಲ್ಲಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.