ಕರ್ನಾಟಕ

karnataka

ETV Bharat / state

ಚಿಕಿತ್ಸೆ ಫಲಕಾರಿಯಾಗದೆ ರೋಗಿ ಸಾವು ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ

ಚಿಕಿತ್ಸೆ ಫಲಕಾರಿಯಾಗದೆ ಗೌಸ್ ಮೋಹಿದ್ದೀನ್ ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದರು‌. ವೈದ್ಯರ ನಿರ್ಲಕ್ಷ್ಯದಿಂದ ಮೋಹಿದ್ದೀನ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡು ಮೃತನ ಸಂಬಂಧಿಕರು ವೈದ್ಯ ಡಾ. ಅರ್ಜುನ್ ಹಾಗೂ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

By

Published : Jul 18, 2019, 11:10 AM IST

ವೈದ್ಯರ ಮೇಲೆ ಹಲ್ಲೆ

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿ ಖಾಸಗಿ ವೈದ್ಯರೊಬ್ಬರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಈ ಗಂಗಾವತಿ ನಗರದಲ್ಲಿ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗಂಗಾವತಿ ನಗರದ ಡಾ. ಅರ್ಜುನ್ ಅವರ ಮೇಲೆ ಗೌಸ್ ಮೋಹಿದ್ದೀನ್ ಎಂಬುವವರ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೈದ್ಯ ಡಾ. ಅರ್ಜುನ್ ಅವರ ಆಸ್ಪತ್ರೆಗೆ ಗೌಸ್ ಮೋಹಿದ್ದೀನ್ (70) ಎಂಬುವವರು ಚಿಕಿತ್ಸೆಗೆ ದಾಖಲಾಗಿದ್ದರು‌. ಚಿಕಿತ್ಸೆ ಫಲಕಾರಿಯಾಗದೆ ಗೌಸ್ ಮೋಹಿದ್ದೀನ್ ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದರು‌. ವೈದ್ಯರ ನಿರ್ಲಕ್ಷ್ಯದಿಂದ ಮೋಹಿದ್ದೀನ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡು ಮೃತನ ಸಂಬಂಧಿಕರು ವೈದ್ಯ ಡಾ. ಅರ್ಜುನ್ ಹಾಗೂ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆ ಮಾಡಿದವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ವೈದ್ಯನ ಮೇಲೆ ಹಲ್ಲೆ ನಡೆಸಿರೋದನ್ನು ಖಂಡಿಸಿ ಇಂದು ಗಂಗಾವತಿ ನಗರದಲ್ಲಿ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವೈದ್ಯರ ಮೇಲೆ ಹಲ್ಲೆ

For All Latest Updates

TAGGED:

ABOUT THE AUTHOR

...view details