ಕರ್ನಾಟಕ

karnataka

ETV Bharat / state

ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್​​​: ಚಾಲಕ ಮತ್ತು ಕ್ಲೀನರ್​​ ರಕ್ಷಣೆ - ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್

ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಚಲಿಸುತ್ತಿದ್ದ ಹಾಲಿನ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಕಂಟೈನರ್​​ನಲ್ಲಿ ಸಿಲುಕಿಕೊಂಡಿದ್ದ ಚಾಲಕ ಮತ್ತು ಕ್ಲೀನರ್​​​ನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್
Container collided with electric pole

By

Published : Mar 26, 2021, 9:13 AM IST

ಕುಷ್ಟಗಿ(ಕೊಪ್ಪಳ):ನಿಯಂತ್ರಣ ತಪ್ಪಿ ಹಾಲಿನ ಕಂಟೈನರ್​​ ವಿದ್ಯುತ್​​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಟೈನರ್​ನಲ್ಲಿ ಸಿಲುಕಿಕೊಂಡಿದ್ದ ಚಾಲಕ ಮತ್ತು ಕ್ಲೀನರ್​​​ನನ್ನು ರಕ್ಷಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್

ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಚಲಿಸುತ್ತಿದ್ದ ಹಾಲಿನ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಚಾಲಕ ಮತ್ತು ಕ್ಲೀನರ್​​ ಒಳಗಡೆ ಸಿಲುಕಿಕೊಂಡಿದ್ದರು. ಇದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಪಘಾತದಲ್ಲಿ ಕ್ಲೀನರ್​ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿ ಆಗಮಿಸಿ ಹೋಲ್ ಮೀಟರ್ ಯಂತ್ರದಿಂದ ಚಾಲಕ ಮತ್ತು ಕ್ಲೀನರ್​​ನನ್ನು ಹೊರಗೆ ತೆಗೆಯಲು ಹರಸಹಾಸ ಪಟ್ಟರು. ಹುಬ್ಬಳ್ಳಿ ನವನಗರ ಮೂಲದ ರೇವಣಸಿದ್ದಯ್ಯ ಹಾಗೂ ಕ್ಲೀನರ್ ನಿರಂಜನ್ ಅಶೋಕ ಕಂಟೈನರ್​​ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಗಳು. ಘಟನೆಯಲ್ಲಿ ಚಾಲಕನಿಗೆ ಬಲಗೈ ಮುರಿದಿದ್ದು, ಕ್ಲೀನರ್​ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details