ಕೊಪ್ಪಳ: ಲಾಕ್ಡೌನ್ ಹಿನ್ನಲೆ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಜನಪ್ರತಿನಿಧಿಗಳು ಸಹಾಯ ಹಸ್ತ ಚಾಚುತ್ತಿದ್ದು, ಇಂದೂ ಸಹ ನಗರದಲ್ಲಿ ಸಂಸದ ಸಂಗಣ್ಣ ಕರಡಿ ಅವರಿಂದ ಆಹಾರ ಸಾಮಗ್ರಿಯ ಕಿಟ್ ವಿತರಿಸಲಾಯಿತು.
ಕೊಪ್ಪಳ ಜನತೆಗೆ ಸಹಾಯ ಹಸ್ತ ಚಾಚುತ್ತಿರುವ ಜನಪ್ರತಿನಿಧಿಗಳು - sanganna karadi latest news
ಲಾಕ್ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ ಜನರಿಗೆ, ಬಡವರಿಗೆ, ನಿರ್ಗತಿಕರಿಗೆ ಜನಪ್ರತಿನಿಧಿಗಳು, ದಾನಿಗಳು, ಸಂಘ-ಸಂಸ್ಥೆಗಳು ನೆರವಾಗುತ್ತಿದ್ದಾರೆ. ಇಂದು ನಗರದಲ್ಲಿ ಸಂಸದ ಸಂಗಣ್ಣ ಕರಡಿ ಅವರಿಂದ ಆಹಾರ ಸಾಮಗ್ರಿಯ ಕಿಟ್ ವಿತರಿಸಲಾಯಿತು.
ಕೊಪ್ಪಳ ಜನತೆಗೆ ಸಹಾಯ ಹಸ್ತ ಚಾಚುತ್ತಿರುವ ಜನಪ್ರತಿನಿಧಿದಳು
ಸಂಕಷ್ಟದಲ್ಲಿರುವ ಜನರನ್ನು ಗುರುತಿಸಿ ಒಟ್ಟು 3,100 ಆಹಾರ ಸಾಮಗ್ರಿಯ ಕಿಟ್ ವಿತರಣೆ ಮಾಡಲಾಗುತ್ತಿದೆ. ನಗರದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಕಿಟ್ಗಳನ್ನು ಸಿದ್ಧಪಡಿಸಿ ಬಿಜೆಪಿ ಮುಖಂಡ ಹಾಗೂ ಸಂಸದರ ಪುತ್ರ ಅಮರೇಶ್ ಕರಡಿ ನೇತೃತ್ವದಲ್ಲಿ ನಗರದ ಎಲ್ಲ ವಾರ್ಡ್ಗಳಿಗೆ ಆಹಾರದ ಕಿಟ್ ಸಾಗಿಸಲಾಯಿತು. ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ಇನ್ನಿತರೆ ದಿನಸಿ ವಸ್ತುಗಳನ್ನು ಈ ಆಹಾರ ಸಾಮಗ್ರಿಯ ಕಿಟ್ ಒಳಗೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಭಾಗ್ಯನಗರ ಪಟ್ಟಣದಲ್ಲೂ ಸಂಸದರ ವತಿಯಿಂದ ಒಂದು ಸಾವಿರ ಕಿಟ್ಗಳನ್ನು ವಿತರಿಸಲಾಗಿತ್ತು.