ಕರ್ನಾಟಕ

karnataka

ಕಸಪೊರಕೆ ಹಿಡಿದು ಕಸಗೂಡಿಸಿದ ಎಸ್ಪಿ, ಸಾರ್ವಜನಿಕರ ಮೆಚ್ಚುಗೆ

By

Published : Jan 17, 2020, 11:00 AM IST

ಸುಪ್ರಸಿದ್ದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪ್ರತಿಯೊಬ್ಬರು ಸಹ ಒಂದಿಲ್ಲೊಂದು ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಾತ್ರಾ ಆವರಣದಲ್ಲಿ ಕಸಗೂಡಿಸುವ ಮೂಲಕ ಗಮನ ಸೆಳೆದಿದ್ದಾರೆ.

KN_KPL_02_17_KASAPORAKE_HIDIDA_SP_VISUALS_7202284
ಕಸಪೊರಕೆ ಹಿಡಿದು ಕಸಗೂಡಿಸಿದ ಎಸ್ಪಿ, ಸಾರ್ವಜನಿಕರ ಮೆಚ್ಚುಗೆ

ಕೊಪ್ಪಳ:ಸುಪ್ರಸಿದ್ದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪ್ರತಿಯೊಬ್ಬರು ಸಹ ಒಂದಿಲ್ಲೊಂದು ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಾತ್ರಾ ಆವರಣದಲ್ಲಿ ಕಸಗೂಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ತಮ್ಮ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಗವಿಮಠದ ಆವರಣಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರು ತಾವೇ ಕಸಪೊರಕೆ ಹಿಡಿದು ಕಸ ಗೂಡಿಸಿದರು. ಹಿರಿಯ ಅಧಿಕಾರಿಯೇ ಕಸಗೂಡಿಸುವುದನ್ನು ಕಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ಕಸಗೂಡಿಸಿ ಸ್ವಚ್ಛತಾ ಕಾರ್ಯ ನಡೆಸಿದರು‌. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಅಧಿಕಾರಿ, ಸಿಬ್ಬಂದಿ ಕಸಗೂಡಿಸಿ ಗಮನ ಸೆಳೆದರು. ಅಲ್ಲದೆ ಅವರ ಸ್ವಚ್ಛತಾ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.

For All Latest Updates

TAGGED:

ABOUT THE AUTHOR

...view details