ಕರ್ನಾಟಕ

karnataka

ETV Bharat / state

ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಲು ಟ್ವಿಟ್ಟರ್ ಮೂಲಕ ಸಿಎಂ, ಕೃಷಿ ಸಚಿವರಿಗೆ ರೈತನ ಮನವಿ..! - ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ರಿಟ್ವೀಟ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕು ಎಂದು ತಾಲೂಕಿನ ಬೆಟಗೇರಿ ಗ್ರಾಮದ ರೈತನೊಬ್ಬ ಸಿಎಂ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾನೆ.

KN_KPL_03_04_FARMER_TWEET_VISUALS_7202284
ಪ್ರತ್ಯೇಕ ಕೃಷಿ ಬಜೆಟ್ ಮಂಡನೆ, ಟ್ವಿಟ್ಟರ್ ಮೂಲಕ ಸಿಎಂ, ಕೃಷಿ ಸಚಿವರಿಗೆ ರೈತನ ಮನವಿ..!

By

Published : Mar 4, 2020, 4:53 PM IST

ಕೊಪ್ಪಳ:ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕು ಎಂದು ತಾಲೂಕಿನ ಬೆಟಗೇರಿ ಗ್ರಾಮದ ರೈತನೊಬ್ಬ ಸಿಎಂ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾನೆ.

ತಾಲೂಕಿನ ಬೆಟಗೇರಿ ಗ್ರಾಮದ ಏಳುಕೋಟೇಶ ಕೋಮಲಾಪುರ ಎಂಬ ರೈತ ತನ್ನ ಬೇಡಿಕೆಗಳನ್ನು ವಿಡಿಯೋ ಮಾಡಿ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾನೆ. ಕೃಷಿಕರಿಗೆ ಉತ್ತೇಜನ ನೀಡುವ ಸಲುವಾಗಿ ಪ್ರತ್ಯೇಕ ಕೃಷಿ ಬಜೆಟ್, ಸಾವಯವ ಕೃಷಿಗೆ ಉತ್ತೇಜನ, ಕಡಿಮೆ ದರದಲ್ಲಿ ಪೋಷಕಾಂಶಗಳು, ಸಾವಯವ ಗೊಬ್ಬರ ಪೂರೈಕೆ ಹಾಗೂ ಹೈನುಗಾರಿಕೆ ಸೇರಿದಂತೆ ಕೃಷಿಯ ಉಪ ಕಸುಬುಗಳಿಗೆ ಬಜೆಟ್ ನಲ್ಲಿ ಉತ್ತೇಜನ ನೀಡುವಂತೆ ಮನವಿ ಮಾಡಿದ್ದಾನೆ.

ಇನ್ನು ರೈತ ಏಳುಕೋಟೇಶ್ ಮಾಡಿರುವ ಟ್ವೀಟ್ ಅನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ರೀಟ್ವೀಟ್ ಮಾಡಿದ್ದಾರೆ. ಸಾವಯವ ಕೃಷಿ ಪದ್ಧತಿ ಅಳವಡಿಕೆಗೆ ಎಲ್ಲ ತಯಾರಿ ನಡೆಸಿದ್ದು ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಬೆಂಬಲ ಬೆಲೆಯ ಬಗ್ಗೆಯೂ ಚರ್ಚೆ ನಡೆದಿದೆ. ರೈತರ ಏಳಿಗೆಗೆ ಸದಾ ಸಿದ್ಧ. ತಮ್ಮ ಅಮೂಲ್ಯ ಸಲಹೆಗೆ ಧನ್ಯವಾದಗಳು ಎಂದು ರೀಟ್ವೀಟ್ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details