ಕರ್ನಾಟಕ

karnataka

By

Published : Mar 22, 2019, 4:19 PM IST

ETV Bharat / state

ಸಾಲಬಾಧೆ ತಾಳಲಾರದೆ ಕೊಪ್ಪಳದ ರೈತ ಆತ್ಮಹತ್ಯೆ

ಕೊಪ್ಪಳ ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ಲಕ್ಷ್ಮಪ್ಪ ಕಳಸಗೌಡ ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲಬಾಧೆಯಿಂದ ಕೊಪ್ಪಳದ ರೈತ ಆತ್ಮಹತ್ಯೆ

ಕೊಪ್ಪಳ:ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆಯಿಂದ ಕೊಪ್ಪಳದ ರೈತ ಆತ್ಮಹತ್ಯೆ

ಗುಂಡೂರು ಗ್ರಾಮದ ಮಲ್ಲಿಕಾರ್ಜುನ ಲಕ್ಷ್ಮಪ್ಪ ಕಳಸಗೌಡ (40) ಆತ್ಮಹತ್ಯೆ ಮಾಡಿಕೊಂಡ ರೈತ. ನಿನ್ನೆ ರಾತ್ರಿ ಹೊಲದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ರೈತ ಮಲ್ಲಿಕಾರ್ಜುನ ಸ್ಥಳೀಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 85 ಸಾವಿರ, ಖಾಸಗಿಯಾಗಿ 50 ಸಾವಿರಕ್ಕೂ ಹೆಚ್ಚು ಸಾಲ ಮಾಡಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details