ಕುಷ್ಟಗಿ (ಕೊಪ್ಪಳ): ಕೇಂದ್ರ ಸರ್ಕಾರವು ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ಹಾಗೂ ರೈತ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಇಂದು ಉಪ ತಹಶೀಲ್ದಾರ್ ವಿಜಯಾ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್ ಮೂಲಿಮನಿ ಮಾತನಾಡಿ, ಸರ್ಕಾರವು ಎಪಿಎಂಸಿ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಸುಗ್ರೀವಾಜ್ಞೆಯ ಮೂಲಕ ಅನುಷ್ಟಾನಕ್ಕೆ ತಂದು ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಕಾರ್ಪೋರೇಟ್ಗಳಿಗೆ ತೆರೆದಿಟ್ಟಿದೆ. ಈ ಕ್ರಮವು ಜನತಂತ್ರ ವಿರೋಧಿಯಾಗಿದೆ ಎಂದರು.