ಗಂಗಾವತಿ/ಕೊಪ್ಪಳ:ನಗರದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಹಾಗೂ ಸಂಶೋಧನಾ ಕೇಂದ್ರದಲ್ಲಿ ರೈತ ದಿನಾಚರಣೆ ಅಂಗವಾಗಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಸನ್ಮಾನಿಸಲಾಯ್ತು.
ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಪ್ರಗತಿಪರ ರೈತರನ್ನು ಸನ್ಮಾನಿಸಿದರು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ, ಮಾರುಕಟ್ಟೆ ಸಿಗದೇ ತೊಂದರೆಯಲ್ಲಿದ್ದಾರೆ. ಅವರು ಎಂದಿಗೂ ಬಡವರಾಗಲು ಸಾಧ್ಯವಿಲ್ಲ. ಇಡೀ ದೇಶಕ್ಕೆ ಅನ್ನವಿಟ್ಟು ಸಲಹುವ ರೈತರು ದೇಶದ ನಾಡಿಮಿಡಿತ ಎಂದರು.ಇದೇ ಸಂದರ್ಭದಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಮುಖರಾದ ದೊಡ್ಡಪ್ಪ ದೇಸಾಯಿ, ಮರಿಯಪ್ಪ ಸಾಲೋಣಿ, ಸಿದ್ದರಾಮಯ್ಯಸ್ವಾಮಿ, ಪ್ರಭಾಕರ ವಕೀಲ, ಯಂಕಪ್ಪ ಕಟ್ಟಿಮನಿ ಹಾಜರಿದ್ರು.