ಕರ್ನಾಟಕ

karnataka

By

Published : Oct 4, 2021, 7:43 AM IST

ETV Bharat / state

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಗವಿಸಿದ್ದೇಶ್ವರ ಶ್ರೀ

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಗವಿಸಿದ್ದೇಶ್ವರ ಸ್ವಾಮೀಜಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸೇರಿಸಲು ನೆರವಾದರು.

gavisiddeshwara-mahaswami-helps-to-send-injured-man-to-hospital-in-his-car
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಗವಿಸಿದ್ದೇಶ್ವರ ಮಹಾಸ್ವಾಮೀಜಿ

ಕೊಪ್ಪಳ: ತಾಲೂಕಿನ ಗಿಣಗೇರಿ ಗ್ರಾಮದ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಗವಿಸಿದ್ದೇಶ್ವರ ಸ್ವಾಮೀಜಿ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ‌ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ರಸ್ತೆ ಅಪಘಾತ ಗಮನಕ್ಕೆ ಬಂದ ತಕ್ಷಣ ಶ್ರೀಗಳು ವಾಹನದಿಂದ ಕೆಳಗಿಳಿದು ಗಾಯಗೊಂಡಿದ್ದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಗವಿಸಿದ್ದೇಶ್ವರ ಮಹಾಸ್ವಾಮೀಜಿ

ಶ್ರೀಗಳು ಗಿಣಗೇರಿ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ವ್ಯಕ್ತಿಯೋರ್ವ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದನ್ನು ಗಮನಿಸಿ ಕಾರು ನಿಲ್ಲಿಸಿದ್ದಾರೆ. ತಕ್ಷಣ ಚಿಕಿತ್ಸೆ ಕೊಡಿಸಬೇಕು ಎಂದು ಆತನನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್​​ಗೆ ಡಿಕ್ಕಿ ಹೊಡೆದ ಮಿನಿ ಲಾರಿ

ABOUT THE AUTHOR

...view details