ಕರ್ನಾಟಕ

karnataka

ETV Bharat / state

ಯಡಿಯೂರಪ್ಪಗೆ ವಯಸ್ಸಾಯ್ತು ಅಂದವರಿಗೆ ಒಳ್ಳೆಯದಾಗಲಿ: ಸಿಎಂ ಬಿಎಸ್​ವೈ - ಕೊಪ್ಪಳದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆ ನಡೆದಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಾ. 3 ಮತ್ತು 4 ರಂದು ಸಂವಿಧಾನದ ಬಗ್ಗೆ ಎಲ್ಲ ಸದಸ್ಯರು ಮಾತನಾಡುತ್ತಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಕೊಪ್ಪಳದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ, CM BSYadiyurappa statement in Koppal
ಕೊಪ್ಪಳದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

By

Published : Feb 26, 2020, 12:48 PM IST

ಕೊಪ್ಪಳ: ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆ ನಡೆದಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಾ. 3 ಮತ್ತು 4 ರಂದು ಸಂವಿಧಾನದ ಬಗ್ಗೆ ಎಲ್ಲ ಸದಸ್ಯರು ಮಾತನಾಡುತ್ತಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಸಿಎಂ ಯಡಿಯೂರಪ್ಪ ಹೇಳಿಕೆ

ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಮಾತನಾಡಿದ ಬಿಎಸ್​ವೈ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವ ಐತಿಹಾಸಿಕ ಕಾರ್ಯಕ್ರಮ ಇದಾಗಿದೆ. ಸಂವಿಧಾನದ ಕನ್ನಡ ಅನುವಾದವನ್ನು ಎಲ್ಲ ಶಾಸಕರಿಗೂ ತಲುಪಿಸಿದ್ದೇವೆ. ಅಧ್ಯಯನ ಮಾಡಿಕೊಂಡು ಬಂದು ಎಲ್ಲರೂ ಮಾತನಾಡಬೇಕೆಂದು ತಿಳಿಸಲಾಗಿದೆ ಎಂದರು.

ಯಡಿಯೂರಪ್ಪಗೆ ವಯಸ್ಸಾಗಿದೆ ಎಂದು ಬಿಜೆಪಿಯ ಹಲವು ಮುಖಂಡರು ವರಿಷ್ಠರಿಗೆ ದೂರು ನೀಡಿರುವ ಕುರಿತ ಪ್ರಶ್ನೆಗೆ ಗರಂ ಆದ ಸಿಎಂ, ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.

ABOUT THE AUTHOR

...view details