ಕರ್ನಾಟಕ

karnataka

ETV Bharat / state

ಮೀಸಲಾತಿ ಬಗ್ಗೆ ಸರ್ಕಾರ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ: ಸಂಸದ ಸಂಗಣ್ಣ ಕರಡಿ - ಮೀಸಲಾತಿ ಬಗ್ಗೆ ಸಂಸದ ಸಂಗಣ್ಣ ಕರಡಿ ಹೇಳಿಕೆ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸುತ್ತಿದ್ದು, ಇದೀಗ ಶ್ರೀಗಳು ರ‍್ಯಾಲಿ, ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳುತ್ತಿದ್ದಾರೆ. ಈ ಕುರಿತಂತೆ ಸಂಸದ ಸಂಗಣ್ಣ ಕರಡಿ ಪ್ರತಿಕ್ರಿಯಿಸಿದ್ದು, ಮೀಸಲಾತಿ ನೀಡುವ ಕುರಿತಂತೆ ಯಾವುದೇ ಸರ್ಕಾರ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ.

ಸಂಸದ ಸಂಗಣ್ಣ ಕರಡಿ
MP Sanganna Karadi

By

Published : Feb 26, 2021, 5:11 PM IST

ಕೊಪ್ಪಳ:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ಯಾವುದೇ ಸರ್ಕಾರ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಈಗ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದ್ದು, ಜಯಮೃತ್ಯುಂಜಯ ಸ್ವಾಮೀಜಿಗಳ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಸಂಸದ ಸಂಗಣ್ಣ ಕರಡಿ ಹೇಳಿಕೆ

ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅವರ ಸೂಚನೆಯಂತೆ ನಾನು, ಸಚಿವ ಮುರುಗೇಶ್​ ನಿರಾಣಿ, ಸಿ.ಸಿ. ಪಾಟೀಲ್ ಸೇರಿಕೊಂಡು ಶ್ರೀಗಳ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮೀಸಲಾತಿ ಬಗ್ಗೆ ಕಾನೂನಾತ್ಮಕವಾಗಿ ಅಧ್ಯಯನ ಮಾಡಬೇಕಿದೆ. ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಬರಬೇಕಿದೆ. ಹೀಗಾಗಿ ಜಯಮೃತ್ಯುಂಜಯ ಸ್ವಾಮಿಗಳಲ್ಲಿ ನಾನು ಸರ್ಕಾರಕ್ಕೆ ಒಂದಿಷ್ಟು ಕಾಲವಕಾಶ ನೀಡುವಂತೆ ವಿನಂತಿ ಮಾಡುತ್ತೇನೆ ಎಂದರು.

ಓದಿ: ಹುಬ್ಬಳ್ಳಿ: ರೈಲ್ವೆ ಇಂಜಿನಿಯರ್ ಕಚೇರಿ ಮೇಲೆ ಸಿಬಿಐ ದಾಳಿ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕು ಎಂಬ ಸಂಕಲ್ಪದೊಂದಿಗೆ ಶ್ರೀಗಳು ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಈ ಶ್ರೇಯಸ್ಸು ಶ್ರೀಗಳಿಗೆ ಸಲ್ಲುತ್ತದೆ. ಸರ್ಕಾರ ತಕ್ಷಣವೇ 2ಎ ಮೀಸಲಾತಿ ನೀಡಲು ಆಗುವುದಿಲ್ಲ. ಯಾವುದೇ‌ ಸರ್ಕಾರವಿರಲಿ, ಯಾರೇ ಮುಖ್ಯಮಂತ್ರಿಗಳಿರಲಿ. ಅದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಈಗ ಮತ್ತೆ ಶ್ರೀಗಳು ರ‍್ಯಾಲಿ, ಉಪವಾಸ ಸತ್ಯಾಗ್ರಹ ಮಾಡುವುದು ಬೇಡ. ಸರ್ಕಾರಕ್ಕೆ ಒಂದು ಗಡುವು ಬೇಕಾದರೆ ನೀಡಲಿ. ಸರ್ಕಾರ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.

ABOUT THE AUTHOR

...view details