ಗಂಗಾವತಿ:ತುಂಗಭದ್ರಾ ಜಲಾಶಯದಿಂದ ನದಿಗೆ 1.41 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರು ಹರಿಸುತ್ತಿರುವುದರಿಂದ ಮತ್ತೆ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ತಾಲೂಕಿನ ಆನೆಗೊಂದಿ ಭಾಗದಲ್ಲಿನ ಐತಿಹಾಸಿಕ ಸ್ಮಾರಕಗಳು ಸಂಪೂರ್ಣ ಜಲಾವೃತವಾಗಿವೆ. ಸಣಾಪುರದ ಕಲ್ಲಿನ ಸೇತುವೆ ಸುತ್ತ ನೀರು ಹರಿಯುತ್ತಿದ್ದು, ದೃಶ್ಯ ಮನಮೋಹಕವಾಗಿದೆ.
ಆನೆಗೊಂದಿ ಸಮೀಪದ ಶ್ರೀ ಕೃಷ್ಣದೇವರಾಯನ ಸಮಾಧಿ ಹಾಗೂ ನವ ವೃಂದಾವನ ಗಡ್ಡೆಗೆ ತೆರಳಲು ಇದ್ದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಜಲಾಶಯದ ಮಟ್ಟ 1632.06 ಅಡಿಯಿದ್ದು, 101.974 ಟಿಎಂಸಿ ನೀರಿನ ಸಂಗ್ರಹಣ ಸಾಮರ್ಥ್ಯವಿದೆ.