ಕೊಪ್ಪಳ:ಭಾರತೀಯ ಜನತಾ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಜೆಡಿಎಸ್ ಸೇರಲು ನನಗೆ ಹುಚ್ಚು ಹಿಡಿದಿಲ್ಲ. ನಾನು ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಅವರ ವಯಸ್ಸಿನವರೆಗೂ ರಾಜಕಾರಣದಲ್ಲಿರುತ್ತೇನೆ. ಆದರೆ ಜೆಡಿಎಸ್ ಮಾತ್ರ ಎಂದಿಗೂ ಸೇರುವುದಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಡ್ಡಿ ಸುಡುವ ಅಭಿಯಾನ ಆರಂಭಿಸಿದ್ದಾರೆ. ಆದರೆ ಈ ವಿಷಯದಲ್ಲಿ ಚಡ್ಡಿ ಸುಡ್ತಾರೋ ಅಥವಾ ತಮ್ಮನ್ನು ತಾವೇ ಸುಟ್ಕೋತಾರೋ ಗೊತ್ತಿಲ್ಲ. ಈ ಚಡ್ಡಿ ಸುಡುವ ವಿಚಾರ ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಒಬ್ಬ ನಾಯಕರಾದವರು ಪ್ರಚೋದನಕಾರಿ ಹೇಳಿಕೆಗಳನ್ನು ಕೊಡಬಾರದು ಎಂದರು.