ಗಂಗಾವತಿ:ವಿವಿಧ ಬ್ಯಾಂಕ್ಗಳಲ್ಲಿ ತೆರೆಯಲಾಗಿರುವ ಪ್ರಧಾನಮಂತ್ರಿ ಜನ್ಧನ್ ಯೋಜನೆಯಲ್ಲಿನ ಉಳಿತಾಯ ಖಾತೆಗೆ ಕೇಂದ್ರ ಸರ್ಕಾರ 500 ರೂಪಾಯಿ ಹಾಕಿದ್ದು, ಹಣ ಪಡೆದುಕೊಳ್ಳಲು ಫಲಾನುಭವಿಗಳು ನೂಕುನುಗ್ಗಲು ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
ಕೊರೊನಾ ವೈರಸ್ನಿಂದ ಇಡೀ ದೇಶ ಲಾಕ್ಡೌನ್ ಆದ ಹಿನ್ನೆಲೆ ಬಡ ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದಿಂದ ಮುಂದಿನ ಮೂರು ತಿಂಗಳ ಕಾಲ ಪ್ರತಿ ತಿಂಗಳ ತಲಾ 500 ರೂಪಾಯಿ ಜಮೆ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆ ಶುಕ್ರವಾರ ಖಾತೆಗಳಿಗೆ ಹಣ ಜಮೆಯಾಗಿದೆ.