ಕರ್ನಾಟಕ

karnataka

ETV Bharat / state

ಸರ್ಕಾರಿ ಕಚೇರಿಯಲ್ಲಿ ಲಂಚಾವತಾರ.. ಗ್ರಾಮ ಪಂಚಾಯತ್​ ಪಿಡಿಓ, ಕಾರ್ಯದರ್ಶಿ ಎಸಿಬಿ ಬಲೆಗೆ - ಕೊಪ್ಪಳದಲ್ಲಿ ಎಸಿಬಿ ದಾಳಿ

ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್​ ಪಿಡಿಓ ಶೇಖಸಾಬ್ ಹಾಗೂ ಕಾರ್ಯದರ್ಶಿ ನೂರುಲ್ಲಾ ಹಕ್ ಅವರು ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇವರು ಜಯ ಕುಮಾರ್ ಎಂಬುವವರಿಗೆ 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ.

ACB trap secretary, PDO when getting bribes
ಎಸಿಬಿ ಬಲೆಗೆ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ

By

Published : Jan 13, 2022, 4:40 PM IST

ಕೊಪ್ಪಳ:ಲಂಚ ಪಡೆಯುವಾಗ ಗ್ರಾಮ ಪಂಚಾಯತ್​ ಪಿಡಿಓ ಹಾಗೂ ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮ ಪಂಚಾಯತ್​ ಪಿಡಿಓ ಶೇಖಸಾಬ್ ಹಾಗೂ ಕಾರ್ಯದರ್ಶಿ ನೂರುಲ್ಲಾ ಹಕ್ ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿಗಳು.

ಎಸಿಬಿ ಬಲೆಗೆ ಬಿದ್ದ ಗ್ರಾಮ ಪಂಚಾಯತ್​ ಪಿಡಿಓ, ಕಾರ್ಯದರ್ಶಿ

ಆಸ್ತಿಗೆ ಸಂಬಂಧಿಸಿದಂತೆ 11ಬಿ ಮಾಡಿಕೊಡಲು ಬಂಡಿಬಸಪ್ಪ ಕ್ಯಾಂಪ್ ನಿವಾಸಿ ವಿಜಯ ಕುಮಾರ್ ಎಂಬುವರಿಗೆ 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ವಿಜಯಕುಮಾರ್ ಅವರಿಂದ ಲಂಚದ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಸಿನಿಮೀಯ ಸ್ಟೈಲ್​ನಲ್ಲಿ ಚೇಸಿಂಗ್​.. ಮಂಗಳೂರಲ್ಲಿ ಕಳ್ಳರ ಹಿಡಿದ ಪೊಲೀಸ್​-ವಿಡಿಯೋ

ಕೊಪ್ಪಳ ಎಸಿಬಿ ಎಸ್ಪಿ ಶ್ರೀಹರಿಬಾಬು ಮಾರ್ಗದರ್ಶನ ಹಾಗೂ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪಿಡಿಓ ಶೇಖಸಾಬ್ ಹಾಗೂ ಕಾರ್ಯದರ್ಶಿ ನೂರುಲ್ಲಾ ಹಕ್​ರನ್ನು ಅಧಿಕಾರಿಗಳು ವಿಚಾರಣೆ ನಡೆಸಿದರು.

ABOUT THE AUTHOR

...view details