ಕರ್ನಾಟಕ

karnataka

By

Published : Jul 21, 2019, 3:23 PM IST

ETV Bharat / state

ವ್ಯಾಸರಾಜರ ವೃಂದಾವನಕ್ಕೆ ವಿಜಯನಗರ ಶಾಸಕ ಆನಂದ್ ಸಿಂಗ್ ಭೇಟಿ..

ಇತ್ತೀಚೆಗೆ ನಿಧಿಯಾಸೆಗಾಗಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದ ವ್ಯಾಸರಾಜ ತೀರ್ಥರ ವೃಂದಾವನಕ್ಕೆ ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಭೇಟಿ ನೀಡಿ ಮಾಹಿತಿ ಪಡೆದರು.

ವ್ಯಾಸರಾಜರ ವೃಂದಾವನಕ್ಕೆ ಶಾಸಕ ಆನಂದ್ ಸಿಂಗ್ ಭೇಟಿ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ನವ ವೃಂದಾವನಕ್ಕೆ ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಭೇಟಿ ನೀಡಿದರು.

ಇತ್ತೀಚಿಗೆ ನಿಧಿಯಾಸೆಗಾಗಿ ದುಷ್ಕರ್ಮಿಗಳು ವ್ಯಾಸರಾಜ ತೀರ್ಥರ ವೃಂದಾವನವನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನವ ವೃಂದಾವನಕ್ಕೆ ಆಗಮಿಸಿದ ಆನಂದ್ ಸಿಂಗ್, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಧ್ವಂಸಗೊಂಡಿದ್ದ ವೃಂದಾವನವನ್ನು ಈಗ ಪುನರ್ ನಿರ್ಮಾಣ ಮಾಡಲಾಗಿದ್ದು, ಶಾಸಕ ಆನಂದ್ ಸಿಂಗ್ ವೃಂದಾನವನದ ದರ್ಶನ ಪಡೆದರು.

ABOUT THE AUTHOR

...view details