ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ನವ ವೃಂದಾವನಕ್ಕೆ ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಭೇಟಿ ನೀಡಿದರು.
ವ್ಯಾಸರಾಜರ ವೃಂದಾವನಕ್ಕೆ ವಿಜಯನಗರ ಶಾಸಕ ಆನಂದ್ ಸಿಂಗ್ ಭೇಟಿ.. - etv bharat
ಇತ್ತೀಚೆಗೆ ನಿಧಿಯಾಸೆಗಾಗಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದ ವ್ಯಾಸರಾಜ ತೀರ್ಥರ ವೃಂದಾವನಕ್ಕೆ ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಭೇಟಿ ನೀಡಿ ಮಾಹಿತಿ ಪಡೆದರು.
![ವ್ಯಾಸರಾಜರ ವೃಂದಾವನಕ್ಕೆ ವಿಜಯನಗರ ಶಾಸಕ ಆನಂದ್ ಸಿಂಗ್ ಭೇಟಿ..](https://etvbharatimages.akamaized.net/etvbharat/prod-images/768-512-3903352-thumbnail-3x2-hrs.jpg)
ವ್ಯಾಸರಾಜರ ವೃಂದಾವನಕ್ಕೆ ಶಾಸಕ ಆನಂದ್ ಸಿಂಗ್ ಭೇಟಿ
ಇತ್ತೀಚಿಗೆ ನಿಧಿಯಾಸೆಗಾಗಿ ದುಷ್ಕರ್ಮಿಗಳು ವ್ಯಾಸರಾಜ ತೀರ್ಥರ ವೃಂದಾವನವನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನವ ವೃಂದಾವನಕ್ಕೆ ಆಗಮಿಸಿದ ಆನಂದ್ ಸಿಂಗ್, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಧ್ವಂಸಗೊಂಡಿದ್ದ ವೃಂದಾವನವನ್ನು ಈಗ ಪುನರ್ ನಿರ್ಮಾಣ ಮಾಡಲಾಗಿದ್ದು, ಶಾಸಕ ಆನಂದ್ ಸಿಂಗ್ ವೃಂದಾನವನದ ದರ್ಶನ ಪಡೆದರು.