ಕರ್ನಾಟಕ

karnataka

ETV Bharat / state

ಜಾನುವಾರು ಮೇಯಿಸುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ - ಚಿರತೆ ದಾಳಿ

ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪರಣ್ಣ ಮನವಳ್ಳಿ, ಗಾಯಾಳು ಮಹಿಳೆಗೆ ಸಾಂತ್ವನ ಹೇಳಿದರು. ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆಯೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

leopard-attacks-a-woman-who-went-to-graze-cattle
ಗಂಭೀರ ಗಾಯ

By

Published : Oct 9, 2020, 4:10 PM IST

ಗಂಗಾವತಿ (ಕೊಪ್ಪಳ):ಜಾನುವಾರುಗಳನ್ನು ಮೇಯಿಸಲು ಬೆಟ್ಟದ ಪ್ರದೇಶಕ್ಕೆ ತೆರಳಿದ್ದ ಮಹಿಳೆ ಚಿರತೆ ದಾಳಿಗೆ ತುತ್ತಾಗಿರುವ ಘಟನೆ ತಾಲೂಕಿನ ರಾಂಪೂರದಲ್ಲಿ ನಡೆದಿದೆ.

ಚಿಕ್ಕರಾಂಪುರ ಗ್ರಾಮದ ಮಾಬಮ್ಮ (55) ಗಾಯಾಳು. ಇವರ ಕತ್ತು, ಕಿವಿ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿರತೆ ದಾಳಿಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪರಣ್ಣ ಮನವಳ್ಳಿ, ಗಾಯಾಳು ಮಹಿಳೆಗೆ ಸಾಂತ್ವನ ಹೇಳಿದರು. ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆಯೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details