ಕರ್ನಾಟಕ

karnataka

ETV Bharat / state

ಪ್ರಿಯಕರನ ಜೊತೆ ಮದುವೆ ಮಾಡಿಕೊಂಡ ಮಗಳು: ಮನ ನೊಂದು ತಂದೆ ಆತ್ಮಹತ್ಯೆ! - Man suicide in Koppal

ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ನಗರದ ದೇವರಾಜ ಅರಸು ಕಾಲೋನಿಯಲ್ಲಿ ನಡೆದಿದೆ. ಮಗಳು ಪ್ರಿಯಕರನೊಂದಿಗೆ ಪರಾರಿಯಾಗದಿದ್ದರಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ ಎನ್ನಲಾಗಿದೆ.

Man suicide in Koppal
ಕೊಪ್ಪಳದಲ್ಲಿ ವ್ಯಕ್ತಿ ಆತ್ಮಹತ್ಯೆ

By

Published : Mar 20, 2020, 5:35 PM IST

Updated : Mar 20, 2020, 7:11 PM IST

ಕೊಪ್ಪಳ:ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೇವರಾಜ ಅರಸು ಕಾಲೋನಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಮೃತ ಬಸವರಾಜನ ಮಗಳು ತಿಂಗಳ ಹಿಂದೆ ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ಪೋಷಕರು ಕರೆದರೂ ಆಕೆ ವಾಪಸ್ ಬಂದಿರಲಿಲ್ಲ. ಇದರಿಂದ ಮನನೊಂದು ಬಸವರಾಜ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬಸವರಾಜ್​ ಕುಟುಂಬಸ್ಥರ ಆಕ್ರಂದನ

ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Last Updated : Mar 20, 2020, 7:11 PM IST

ABOUT THE AUTHOR

...view details