ಕರ್ನಾಟಕ

karnataka

ಬಿಜೆಪಿ ಮುಖಂಡರು ಯಾರೇ ಸಾಯಲಿ ಕಾಂಗ್ರೆಸ್​ನಿಂದ 1 ಕೋಟಿ ರೂ.: ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

By

Published : Oct 5, 2021, 10:14 PM IST

Updated : Oct 5, 2021, 10:54 PM IST

ಬಿಜೆಪಿ ಅತ್ಯಂತ ಕೆಟ್ಟ ಸರ್ಕಾರವೆಂದು ನಿರೂಪಿಸಿದೆ. ಚಳಿ,‌ ಹಿಮ, ಮಳೆ‌ ಲೆಕ್ಕಿಸದೇ ಹರ್ಯಾಣ, ಪಂಜಾಬ್, ಛತ್ತೀಸಗಢ ರೈತರ ಪ್ರತಿಭಟನೆ ನಡೆಯುತ್ತಿದೆ ಈ ರೈತರ ಪ್ರತಿಭಟನೆಯಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವರ ಪುತ್ರನ ಕಾರು ರೈತನ ಮೇಲೆ ಹರಿದು, ಎಂಟು ಜನ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ಶಾಸಕ ಅಮರೇಗೌಡ ಪಾಟೀಲ ಕಿಡಿಕಾರಿದ್ದಾರೆ.

ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ
ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ಕುಷ್ಟಗಿ (ಕೊಪ್ಪಳ):ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹಾಯಿಸಿ ರೈತರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಸರ್ಕಾರ 45 ಲಕ್ಷ ರೂ. ಪರಿಹಾರ ಮಾತ್ರ ನೀಡಿದೆ. ಬಿಜೆಪಿ ಮುಖಂಡರಲ್ಲಿ ಯಾರಾದ್ರೂ ಸಾಯಲಿ ಕಾಂಗ್ರೆಸ್ ಪಕ್ಷದಿಂದ ಒಂದು ಕೋಟಿ ರೂ ಪರಿಹಾರ ಕೊಡುವುದಾಗಿ ಶಾಸಕ ಅಮರೇಗೌಡ ಪಾಟೀಲ ಗುಡುಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ ಮಿಶ್ರಾ ಪುತ್ರನ ಕಾರು ಹರಿದು 8 ಜನ ರೈತರ ದುರ್ಮರಣ ಖಂಡಿಸಿ ಬಸವೇಶ್ವರ ವೃತ್ತದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪಂಜಿನ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದರು.

ಬಿಜೆಪಿ ಅತ್ಯಂತ ಕೆಟ್ಟ ಸರ್ಕಾರ ಎಂದು ನಿರೂಪಿಸಿದೆ. ಚಳಿ,‌ ಹಿಮ, ಮಳೆ‌ ಲೆಕ್ಕಿಸದೇ ಹರ್ಯಾಣ, ಪಂಜಾಬ್, ಛತ್ತೀಸಗಢ ರೈತರ ಪ್ರತಿಭಟನೆ ನಡೆಯುತ್ತಿದೆ ಈ ರೈತರ ಪ್ರತಿಭಟನೆಯಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವರ ಪುತ್ರನ ಕಾರು ರೈತನ ಮೇಲೆ ಹರಿದು, ಎಂಟು ಜನ ರೈತರ ಹತ್ಯೆಗೆ ಕಾರಣರಾಗಿದ್ದಾರೆ. ಸದರಿ ಆರೋಪಿ ಬಂಧಿಸದೇ 45 ಲಕ್ಷರೂ ಪರಿಹಾರ ಘೋಷಿಸಿದೆ. ಈ ದೇಶದಲ್ಲಿ ಬಿಜೆಪಿ ತೊಲಗುವರೆಗೂ ಈ ಹೋರಾಟ ನಡೆಯಲಿದೆ ಎಂದರು.

ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ಈ ಪ್ರಕರಣದಲ್ಲಿ ಮಂತ್ರಿ ಮಗನನ್ನು ಬಂಧಿಸಿಲ್ಲ. ಅಲ್ಲದೇ ಪ್ರತಿಭಟನಾ ನಿರತರಾದ ಕಾಂಗ್ರೆಸ್ ಪಕ್ಷದ ಪ್ರಿಯಾಂಕ ಗಾಂಧಿ ಅವರನ್ನು ಕೂಡಿ ಹಾಕಿದ್ದು, ಪೊಲೀಸರು ಅವರ ಕೈ, ಮೈ ಮುಟ್ಟಿದ್ದಾರೆ. ಪೊಲೀಸರು ಬಿಜೆಪಿ ಚೇಲಾಗಳಂತೆ ವರ್ತಿಸಿದ್ದಾರೆ ಎಂದು ಹರಿಹಾಯ್ದರು.

ಇದಕ್ಕೂ ಮುನ್ನ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮಲ್ಲಯ್ಯ ವೃತ್ತದಿಂದ ಆರಂಭಿಸಿ, ಮಾರುತಿ ವೃತ್ತ ಬಸವೇಶ್ವರ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಮೃತ ರೈತರಿಗೆ ಒಂದು ನಿಮಿಷದ ಮೌನ ಆಚರಿಸಲಾಯಿತು.

Last Updated : Oct 5, 2021, 10:54 PM IST

ABOUT THE AUTHOR

...view details