ಕುಷ್ಟಗಿ(ಕೊಪ್ಪಳ): ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಮಾಜಿ ಸಿಎಂ ಕುಮಾರಸ್ವಾಮಿ ಉದ್ದೇಶಪೂರ್ವಕವಾಗಿ ಅಭ್ಯರ್ಥಿ ಹಾಕಿದ್ದರು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಆಪ್ತರೊಂದಿಗೆ ಕರೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಪುತ್ರ ಡಾ.ಅಜಯ್ ಕುಮಾರ್ ಸಿಂಗ್ ಇಲ್ಲವೇ ಅವರ ಸಹೋದರ ಚಂದ್ರ ಶೇಖರ್ಗೆ ಟಿಕೆಟ್ ನೀಡುವಂತೆ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಆದರೆ, ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಮಾಲಾ ಅವರಿಗೆ ಪಕ್ಷ ಟಿಕೆಟ್ ನೀಡಿತು ಎಂದು ದೂರವಾಣಿ ಕರೆಯಲ್ಲಿ ಅಮರೇಗೌಡ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.