ಕರ್ನಾಟಕ

karnataka

By

Published : Aug 24, 2019, 3:12 AM IST

ETV Bharat / state

ಮೇಯಲು ಹೋಗಿದ್ದ 30 ಕ್ಕೂ ಹೆಚ್ಚು ಕುರಿಗಳು ಸಾವು... ಮಾಲೀಕರು ಕಂಗಾಲು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿವೆ.

ಕುರಿಗಳು ಸಾವು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿವೆ.

ಗ್ರಾಮದ ಶಿವಪ್ಪ, ಹನುಮಪ್ಪ, ಬಸಪ್ಪ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಅಡವಿಗೆ ಮೇಯಲು ಹೋದಾಗ ಏಕಾಏಕಿ ಈ ಕುರಿಗಳು ಸಾವನ್ನಪ್ಪಿದ್ದು, ಕೆಲವು ಕುರಿಗಳು ಅಸ್ವಸ್ಥಗೊಂಡಿವೆ.

ಕುರಿಗಳು ಸಾವು

ಈ ಕುರಿತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುರಿಗಳ‌ ಮಾಲೀಕರು ಆರೋಪಿಸಿದ್ದಾರೆ. ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details