ಕರ್ನಾಟಕ

karnataka

ETV Bharat / state

ಅಕ್ರಮ ಮರಳು ದಂಧೆ: ಅಪರ ಡಿಸಿ ನೇತೃತ್ವದಲ್ಲಿ ದಾಳಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುತ್ತಮುತ್ತ ನಡೆಸುತ್ತಿದ್ದ ಅಕ್ರಮ ಮರಳು ಸಾಗಣೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ಮಾಡಲಾಯಿತು.

By

Published : May 11, 2019, 4:31 PM IST

Updated : May 11, 2019, 7:08 PM IST

ಗಂಗಾವತಿ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು

ಕೊಪ್ಪಳ: ಗಂಗಾವತಿ ಸುತ್ತಮುತ್ತ ನಡೆಸುತ್ತಿದ್ದ ಫಿಲ್ಟರ್​ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಗಂಗಾವತಿ ತಾಲೂಕಿನ ಸುತ್ತಲಿನ ಪ್ರದೇಶದಲ್ಲಿದ್ದ 4ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಮರಳನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.ಫಿಲ್ಟರ್ ಮರಳು ದಂಧೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದಿತ್ತು. ಈ ಮರಳನ್ನು ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Last Updated : May 11, 2019, 7:08 PM IST

ABOUT THE AUTHOR

...view details