ಕೊಪ್ಪಳ: ಗಂಗಾವತಿ ಸುತ್ತಮುತ್ತ ನಡೆಸುತ್ತಿದ್ದ ಫಿಲ್ಟರ್ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಮರಳು ದಂಧೆ: ಅಪರ ಡಿಸಿ ನೇತೃತ್ವದಲ್ಲಿ ದಾಳಿ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುತ್ತಮುತ್ತ ನಡೆಸುತ್ತಿದ್ದ ಅಕ್ರಮ ಮರಳು ಸಾಗಣೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ಮಾಡಲಾಯಿತು.
ಗಂಗಾವತಿ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು
ಗಂಗಾವತಿ ತಾಲೂಕಿನ ಸುತ್ತಲಿನ ಪ್ರದೇಶದಲ್ಲಿದ್ದ 4ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಮರಳನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.ಫಿಲ್ಟರ್ ಮರಳು ದಂಧೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದಿತ್ತು. ಈ ಮರಳನ್ನು ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated : May 11, 2019, 7:08 PM IST