ಕರ್ನಾಟಕ

karnataka

By

Published : Apr 2, 2021, 12:51 PM IST

ETV Bharat / state

ಮಸ್ಕಿ ಉಪಚುನಾವಣೆಯಲ್ಲಿ ಪ್ರತಾಪ್​​​​ಗೌಡ ಪಾಟೀಲ್​ಗೆ ಗೆಲುವು ನಿಶ್ಚಿತ : ಬಿ.ವೈ. ವಿಜಯೇಂದ್ರ

ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಸ್ಕಿ ಉಪಚುನಾವಣೆ ಪ್ರಚಾರ ಕಾರ್ಯ ಕೈಗೊಂಡಿದ್ದರು. ಈ ವೇಳೆ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿವೈ ವಿಜಯೇಂದ್ರ
BY Vijayendra

ಕುಷ್ಟಗಿ (ಕೊಪ್ಪಳ):ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್​​​​​ಗೌಡ ಪಾಟೀಲರಿಗೆ ಗೆಲುವು ನಿಶ್ಚಿತ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಕುಷ್ಟಗಿ ಮಾರ್ಗವಾಗಿ ಮಸ್ಕಿ ಉಪಚುನಾವಣೆ ಪ್ರಚಾರ ಕಾರ್ಯಕ್ಕೆ ತೆರಳುವ ಮಾರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಕಾಂಗ್ರೆಸ್ ಅಲೆ ಇರಬಹುದು. ಚುನಾವಣೆ ಹೊತ್ತಿಗೆ ಕಡಿಮೆಯಾಗಲಿದ್ದು, ಬಿಜೆಪಿ ನಿರೀಕ್ಷಿತ ಜಯ ಸಾಧಿಸಲಿದೆ ಎಂದರು.

ಓದಿ: ಸಿಡಿ ತನಿಖೆ ಮುಗಿದ ಬಳಿಕ ಟೀಕೆ ಮಾಡಲಿ, ಈಗ ಟೀಕೆ ಮಾಡುವ ಅಗತ್ಯವಿಲ್ಲ: ಪ್ರವೀಣ್ ಸೂದ್

ಸಿಡಿ ಪ್ರಕರಣ ಕಾಂಗ್ರೆಸ್ ಪಿತೂರಿಯಾಗಿದ್ದು, ಈ ಚುನಾವಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಕಲ್ಯಾಣ ಕರ್ನಾಟಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಡೆಗಣಿಸಿಲ್ಲ ಎಂದರು.

ABOUT THE AUTHOR

...view details