ಗಂಗಾವತಿ:ಠಾಣೆಗೆ ನುಗ್ಗಿ ದಾಂಧಲೆ ಮಾಡಿ ಸರ್ಕಾರದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಕೆಜಿ, ಡಿಜೆ ಹಳ್ಳಿ ಪ್ರಕರಣ: ಗಂಗಾವತಿಯಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ - ಬೆಂಗಳೂರು ಗಲಭೆ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
![ಕೆಜಿ, ಡಿಜೆ ಹಳ್ಳಿ ಪ್ರಕರಣ: ಗಂಗಾವತಿಯಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ protest-against-bangalore-violence](https://etvbharatimages.akamaized.net/etvbharat/prod-images/768-512-8421777-thumbnail-3x2-bharajrandal.jpg)
ಡಿಜೆ ಹಳ್ಳಿ ಪ್ರಕರಣ
ಈ ಕುರಿತು ತಹಶೀಲ್ದಾರ್ ಕವಿತಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಉಭಯ ಸಂಘಟನೆಯ ಮುಖಂಡರು, ರಾಜ್ಯದಲ್ಲಿ ಶಾಂತಿ ನೆಲೆಸಬೇಕಾದರೆ ಕೋಮುಭಾವನೆ ಕೆರಳಿಸುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಕೆಜಿ, ಡಿಜೆ ಹಳ್ಳಿ ಪ್ರಕರಣ ವಿರೋಧಿಸಿ ಗಂಗಾವತಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಭಟನೆ
ಭಜರಂಗದಳದ ಉತ್ತರ ಪ್ರಾಂತ ಸಂಘಟನೆಯ ಮುಖಂಡ ವಿನಯ ಪಾಟೀಲ ಮಾತನಾಡಿ, ಬೆಂಗಳೂರು ಗಲಭೆಯಿಂದ ಅಮಾಯಕರಿಗೆ ತೊಂದರೆಯಾಗಿದೆ. ಸಹಜ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಘಟನೆ ಪೂರ್ವನಿಯೋಜಿತವಾಗಿದ್ದು, ಇದರಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ಕೈವಾಡವಿದೆ. ಅದಕ್ಕಾಗಿ ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.