ಕರ್ನಾಟಕ

karnataka

By

Published : Nov 19, 2019, 11:16 AM IST

ETV Bharat / state

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಪತ್ರಿಕಾ ಛಾಯಾಗ್ರಾಹಕನ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರ್​ಟಿಓ ಇನ್ಸ್​ಪೆಕ್ಟರ್ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ಆರ್​ಟಿಓ ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಕೊಪ್ಪಳ:ಪತ್ರಿಕಾ ಛಾಯಾಗ್ರಾಹಕನ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರ್​ಟಿಓ ಇನ್ಸ್​ಪೆಕ್ಟರ್ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್​ಟಿಓ) ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ದಿನಪತ್ರಿಕೆ ಛಾಯಾಗ್ರಾಹಕ ನಾಗರಾಜ ಹಡಗಲಿ ಸುದ್ದಿಯೊಂದಕ್ಕೆ ಸಂಬಂಧಿಸಿದಂತೆ ಫೋಟೋ ತೆಗೆಯಲು ನಗರ ದ ಹೊರವಲಯದಲ್ಲಿರುವ ಆರ್​ಟಿಓಗೆ ಹೋಗಿದ್ದರು. ಈ ವೇಳೆ ಆರ್​ಟಿಓ ಇನ್ಸ್​ಪೆಕ್ಟರ್ ಮಂಜುನಾಥ್​ ಎಂಬುವವರು ನಾಗರಾಜ ಹಡಗಲಿಯವರ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛಾಯಾಗ್ರಾಹಕನ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಆರ್​ಟಿಓ ಕಚೇರಿ ಮುಂದೆ ಧರಣಿ ನಡೆಸಿದರು. ಇನ್ಸ್​ಪೆಕ್ಟರ್ ಮಂಜುನಾಥ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಧರಣಿ ನಿರತರನ್ನು ಸಮಾಧಾನಪಡಿಸಿದರು. ಇನ್ಸ್​ಪೆಕ್ಟರ್ ಮಂಜುನಾಥ್​ ಕ್ಷಮೆ ಕೇಳಿದ ಬಳಿಕ ಪ್ರತಿಭಟನೆ ವಾಪಾಸ್ ಪಡೆಯಲಾಯಿತು.

For All Latest Updates

TAGGED:

ABOUT THE AUTHOR

...view details