ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 1,70,000 ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಶಿವಪುರ ಬಳಿ ಭತ್ತ ನಾಟಿ ಮಾಡಲು ಹೋಗಿದ್ದ ಹತ್ತು ಜನ ರೈತರು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು : ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ - ತುಂಗಭದ್ರಾ ನದಿಗೆ ನೀರು
ತುಂಗಭದ್ರಾ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಹರಿಬಿಟ್ಟ ಪರಿಣಾಮ ಕೊಪ್ಪಳ ತಾಲೂಕಿನ ಶಿವಪುರ ಬಳಿ ಭತ್ತ ನಾಟಿ ಮಾಡಲು ಹೋಗಿದ್ದ ರೈತರು ಸಿಲುಕಿಕೊಂಡಿದ್ದರು. ಇವರನ್ನು ರಕ್ಷಣೆ ಮಾಡಲಾಗಿದೆ.

ತುಂಗಭದ್ರಾ ನದಿಗೆ ನೀರು
ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ
ಸ್ಥಳಕ್ಕೆ ಆಗಮಿಸಿದ ಕೊಪ್ಪಳ ತಹಶೀಲ್ದಾರ್ ವಿಠ್ಠಲ್, ಅಗ್ನಿಶಾಮಕ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಚರಣೆಯಿಂದ 10 ಜನರನ್ನ ಸುರಕ್ಷಿತವಾಗಿ ಕರೆತರಲಾಗಿದೆ.
ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ
ಇದನ್ನೂ ಓದಿ:ಚಿಕ್ಕಮಗಳೂರು: ಭಾರಿ ಮಳೆಗೆ ವಿದ್ಯಾರ್ಥಿನಿ ತಲೆ ಮೇಲೆ ಬಿದ್ದ ಶಾಲೆಯ ಹೆಂಚು
Last Updated : Aug 10, 2022, 6:55 PM IST