ಕರ್ನಾಟಕ

karnataka

By

Published : Dec 20, 2022, 6:20 PM IST

ETV Bharat / state

ಕೊಪ್ಪಳ: ರಸ್ತೆ ಸರಿಪಡಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ

ಕಲ್ಮಲ ಶಿಗ್ಗಾಂವ್ ರಾಜ್ಯ ಹೆದ್ದಾರಿ 23 ರಲ್ಲಿ ಗುಂಡಿ ಬಿದ್ದಿದ್ದು, ಸರಿ ಪಡಿಸುವಂತೆ ಆಗ್ರಹಿಸಿ ಅಳವಂಡಿ ಭಾಗದ ರೈತರಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಯಿತು.

A walk from the farmers of Alawandi area to the District Collector's office
ಅಳವಂಡಿ ಭಾಗದ ರೈತರಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ

ಅಳವಂಡಿ ಭಾಗದ ರೈತರಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ

ಕೊಪ್ಪಳ:ಕಲ್ಮಲ ಶಿಗ್ಗಾಂವ್ ರಾಜ್ಯ ಹೆದ್ದಾರಿ ಸರಿ ಪಡಿಸುವಂತೆ ಆಗ್ರಹಿಸಿ ಅಳವಂಡಿ ಭಾಗದ ರೈತರಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಯಿತು.

ಕಲ್ಮಲ ಶಿಗ್ಗಾಂವ್ ರಾಜ್ಯ ಹೆದ್ದಾರಿ 23 ರಲ್ಲಿ ಗುಂಡಿ ಬಿದ್ದಿದ್ದು, ಜನ ಸಂಚಾರ ಕಷ್ಟಕರವಾಗಿದೆ. ಕಳೆದ ನಾಲ್ಕು ವರ್ಷದಿಂದ ರಸ್ತೆ ಅಭಿವೃದ್ಧಿ ಪಡಿಸಲು ಆಗ್ರಹಿಸುತ್ತಿದ್ದರೂ ಸಹ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೇಸತ್ತ ಜನರು ನಿನ್ನೆ ಅಳವಂಡಿಯಿಂದ ಆರಂಭವಾದ ಪಾದಯಾತ್ರೆ ಇಂದು ಗವಿಮಠದಿಂದ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.

ಈ ಕುರಿತು ಶೀಘ್ರ ಕ್ರಮಕೈಗೊಳ್ಳದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕರಿಸು ಎಚ್ಚರಿಕೆಯನ್ನು ಪ್ರತಿಭಟನಾಕಾರರ ನೀಡಿದರು. ಈ ಪ್ರತಿಭಟನೆಯಲ್ಲಿ ಅಳವಂಡಿ ಭಾಗದ ರೈತರು, ಸ್ವಾಮೀಜಿಗಳು, ವಿವಿಧ ಪಕ್ಷದ ನಾಯಕರು ಪಕ್ಷಾತೀತವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ:ಕೆಎಂಎಫ್ ನಂದಿನಿ​ ಸಿಹಿ ಉತ್ಸವಕ್ಕೆ ಚಾಲನೆ: 40 ಲಕ್ಷ ರೂ ವಹಿವಾಟು ಗುರಿ

ABOUT THE AUTHOR

...view details