ಕೊಪ್ಪಳ:ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನರು ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಈ ನಡುವೆ ಗುಣಮುಖರ ಸಂಖ್ಯೆಯೂ ಹೆಚ್ಚುತ್ತಿದೆ.
ಸೋಂಕಿತರು ಧೈರ್ಯಗೆಡದೇ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಬೇಕು ಎಂದು ಗುಣಮುಖರಾದ ಅನೇಕರು ಹೇಳುತ್ತಿದ್ದಾರೆ. ಕೊರೊನಾ ಸೋಂಕಿನ ಮೊದಲನೇ ಅಲೆಯಲ್ಲಿ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ವೆಂಕನಗೌಡ ಹಿರೇಗೌಡರ ಕುಟುಂಬ ಸೋಂಕಿಗೆ ಒಳಗಾಗಿತ್ತು. ಒಂದನೇ ಅಲೆಯಲ್ಲಿ ಕೊರೊನಾ ಗೆದ್ದಿರುವ ಅವರು, ಈಟಿವಿ ಭಾರತದೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.