ಕರ್ನಾಟಕ

karnataka

ETV Bharat / state

ಸಾರ್ವಜನಿಕ ಶೌಚಾಲಯ ಕೆಡವಲು ಯತ್ನ : ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ - ಹಣವಾಳದಲ್ಲಿ ಸಾರ್ವಜನಿಕ ಮಹಿಳೆಯರಿಂದ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ

ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ಗ್ರಾ.ಪಂ ಅಧಿಕಾರಿಗಳು ಸಾರ್ವಜನಿಕ ಶೌಚಾಲಯ ಕೆಡವಲು ಮುಂದಾಗಿದ್ದಾರೆ ಎಂಬ ವಿಷಯ ತಿಳಿದ ಗ್ರಾಮದ ಮಹಿಳೆಯರು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

Women protested by siege to Gram panchayath
ಪಂಚಾಯಿತಿಗೆ ಮುತ್ತಿಗೆ ಪ್ರತಿಭಟಿಸಿದ ಮಹಿಳೆಯರು

By

Published : Nov 29, 2019, 6:43 PM IST

ಗಂಗಾವತಿ:ಸಾರ್ವಜನಿಕ ಶೌಚಾಲಯವನ್ನು ನೆಲಸಮ ಮಾಡಲು ಹೊರಟ ಗ್ರಾಮ ಪಂಚಾಯತಿ ಅಧಿಕಾರಿಗಳ ಕ್ರಮ ಖಂಡಿಸಿ, ಗ್ರಾಮದ ಮಹಿಳೆಯರು ಪಂಚಾಯಿತಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳನ್ನು ಹೊರಕ್ಕೆ ಎಳೆದು ಬೀಗ ಹಾಕಿದ ಘಟನೆ ತಾಲೂಕಿನ ಹಣವಾಳದಲ್ಲಿ ನಡೆದಿದೆ.

ಗ್ರಾಮದ ಅಂಬೇಡ್ಕರ್ ವೃತ್ತದ ಸಮೀಪ ಇರುವ ಮಹಿಳಾ ಶೌಚಾಲಯದ ಕಟ್ಟಡ ನೆಲಸಮಕ್ಕೆ ತಾಲೂಕು ಪಂಚಾಯತಿಯ ಸಿಇಒ ಮೋಹನ್ ನೇತೃತ್ವದಲ್ಲಿ ಸಿಬ್ಬಂದಿ ಮುಂದಾಗಿದ್ದರು. ಇದನ್ನು ವಿರೋಧಿಸಿದ ಮಹಿಳೆಯರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಶೌಚಾಲಯ ನೆಲಸಮ ಮಾಡಿ ಅದೇ ಸ್ಥಳದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಿಕೊಡುವುದಾದರೆ ಮಾತ್ರ ಕಟ್ಟಡ ಒಡೆಯಲು ಅವಕಾಶ ಮಾಡಿ ಕೊಡುವುದಾಗಿ ಧರಣಿ ನಿರತ ಮಹಿಳೆಯರು ಪಟ್ಟು ಹಿಡಿದರು.

ಶೌಚಾಲಯ ನೆಲಸಮ ಮಾಡಿ ಗ್ರಾಮ ಪಂಚಾಯಿತಿಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳು ಯೋಜನೆ ರೂಪಿಸಿದ್ದರು ಎನ್ನಲಾಗಿದ್ದು, ಸುಲಭ ಶೌಚಾಲಯ ಬೇಕಿದ್ದರೆ ಕಟ್ಟಿ ಆದರೆ ಬೇರೆ ಯಾವ ಕಟ್ಟಡ ಕಟ್ಟಲು ಇಲ್ಲಿ ಅವಕಾಶ ನೀಡುವುದಿಲ್ಲ ಎಂದು ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details