ಕರ್ನಾಟಕ

karnataka

ETV Bharat / state

ಒಂದೇ ಗ್ರಾಮದಲ್ಲಿ 12 ಸೋಂಕಿತರು; ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹೆಚ್ಚಿದ ಆತಂಕ - ಒಂದೇ ಗ್ರಾಮದಲ್ಲಿ 12 ಸೋಂಕಿತರು ಪತ್ತೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹೆಚ್ಚಿದ ಆತಂಕ

ಶ್ರೀರಂಗಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಒಂದೇ ದಿನ 12 ಸೋಂಕಿತರು ಪತ್ತೆಯಾಗಿದ್ದಾರೆ. ಗ್ರಾಮಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

12 Corona infected detected in Mandya
ಒಂದೇ ಗ್ರಾಮದಲ್ಲಿ 12 ಸೋಂಕಿತರು ಪತ್ತೆ

By

Published : Mar 24, 2021, 10:29 AM IST

ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನ ಎಂ. ಶೆಟ್ಟಿಹಳ್ಳಿ ಗ್ರಾಮದಲ್ಲಿ ಕೊರೊನಾ ಸೋಂಕನ್ನು ನಿರ್ಲಕ್ಷ್ಯ ಮಾಡಿದ್ದರಿಂದ, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಗ್ರಾಮಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಹಬ್ಬಕ್ಕೆ ನಿರ್ಬಂಧ ಹೇರಲಾಗಿದ್ದು, ನೆಂಟರಿಷ್ಟರನ್ನು ಕರೆಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.

ಇಂದು ಒಂದೇ ದಿನ 12 ಸೋಂಕಿತರು ಗ್ರಾಮದಲ್ಲಿ ಪತ್ತೆ ಹಿನ್ನೆಲೆಯಲ್ಲಿ ಗ್ರಾಮವನ್ನು ಕಂಟೇನ್ಮೆಂಟ್​ ವಲಯವಾಗಿ ಘೋಷಿಸಿ, ರ್ಯಾಂಡಂ ಟೆಸ್ಟ್​ಗೆ ಸೂಚನೆ ನೀಡಿದೆ. ಹೆಚ್ಚಿನ ಸೋಂಕಿತರ ಪತ್ತೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೊರೊನಾ ಸೋಂಕು ಹೆಚ್ಚಳದಿಂದ ಕಠಿಣ ಕ್ರಮಕ್ಕೆ ತಾಲೂಕು ಆಡಳಿತ ಮುಂದಾಗಿದೆ.

ಓದಿ : ಬ್ರೆಜಿಲ್​ನಲ್ಲಿ ಒಂದೇ ದಿನಕ್ಕೆ 3000 ಜನ ಕೋವಿಡ್​ಗೆ ಬಲಿ.. ಇದು ವಿಶ್ವಕ್ಕೆ ಎಚ್ಚರಿಕೆಯ ಗಂಟೆ!

ABOUT THE AUTHOR

...view details