ಮಂಡ್ಯ:ಸಕ್ಕರೆನಾಡಿನಲ್ಲಿ ಕೊರೊನಾ ಆರ್ಭಟದಿಂದ ಜಿಲ್ಲೆಯಲ್ಲಿ ಒಂದೇ ದಿನ 279 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 22,262 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ನಿನ್ನೆ 71 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 20,651 ಮಂದಿ ಕೊರೊನಾದಿಂದ ಗುಣಮುಖವಾಗಿ ಡಿಸ್ಜಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1442 ಕ್ಕೆ ಏರಿಕೆಯಾಗಿದ್ದು, ನಿನ್ನೆ ಇಬ್ಬರೂ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 168 ಜನ ಕೊರೊನಾಗೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.