ಮಂಡ್ಯ: ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯೋರ್ವನ 7 ಲಕ್ಷ ಹಣವನ್ನು ಸಿನಿಮೀಯ ರೀತಿಯಲ್ಲಿ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಲ್ಲಿನ ಕೆ ಆರ್ ಪೇಟೆಯಲ್ಲಿ ನಡೆದಿದೆ.
ನಾಗರಾಜು ಹಣ ಕಳೆದುಕೊಂಡಿರುವ ವ್ಯಕ್ತಿ. ಇಂದು ಪಟ್ಟಣದ ಕೆನರಾ ಬ್ಯಾಂಕ್ ನಿಂದ 7 ಲಕ್ಷ ಹಣ ಡ್ರಾ ಮಾಡಿಕೊಂಡು ತಮ್ಮ ಕಾರಿನ ಒಳಗೆ ಇಟ್ಟುಕೊಂಡು ಮನೆಗೆ ತೆರಳಿದ್ದಾರೆ. ಕಾರ್ ಪಾರ್ಕ್ ಮಾಡಿ ಮನೆಯ ಬಾಗಿಲು ತೆರೆದು ಬರುವಷ್ಟರಲ್ಲಿ ಕಾರಿನ ಗಾಜು ಒಡೆದು ಖದೀಮರು ಹಣ ಕಳವು ಮಾಡಿದ್ದಾರೆ.