ಕರ್ನಾಟಕ

karnataka

By

Published : Jan 7, 2022, 2:10 AM IST

ETV Bharat / state

ಓಂ ಶಕ್ತಿ ಯಾತ್ರೆ ಮುಗಿಸಿ ಬಂದ 89 ಮಂದಿಗೆ ಕೊರೊನಾ ಸೋಂಕು, ಮಂಡ್ಯದಲ್ಲಿ 144 ಸೆಕ್ಷನ್​ ಘೋಷಣೆ

ಇತ್ತೀಚೆಗೆ ತಮಿಳುನಾಡಿನ ಓಂ ಶಕ್ತಿ ದೇವಾಯಕ್ಕೆ ಹೋಗಿ ಬಂದವರಲ್ಲಿ ಸೋಂಕು ದೃಢಪಡುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಮಂಡ್ಯ ಜಿಲ್ಲೆಯ ಹಲವಾರು ಹಳ್ಳಿಗಳಿಂದ ಈವರೆಗೆ ಸುಮಾರು 3600 ಮಂದಿ ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದು, ಎಲ್ಲರಿಗೂ ಕರೊನಾ ಟೆಸ್ಟ್​ಗೆ ಒಳಪಡಿಸಿದಾಗ 89 ಮಂದಿಗೆ ಸೋಂಕು ವಕ್ಕರಿಸಿದೆ. ಇದು ಜನರನ್ನು ನಿದ್ದೆಗೆಡಿಸುವಂತೆ ಮಾಡಿದೆ.

89 Om Shakthi travelers tested positive
ಓಂ ಶಕ್ತಿ ಯಾತ್ರೆ ಮುಗಿಸಿ ಬಂದ 89 ಮಂದಿಗೆ ಕೊರೊನಾ ಸೋಂಕು

ಮಂಡ್ಯ: ಕರೊನಾ ಮೊದಲ ಹಾಗೂ ಎರಡನೇ ಅಲೆ ಆರಂಭದಲ್ಲಿ ಸಕ್ಕರೆ ನಾಡು ಮಂಡ್ಯಕ್ಕೆ ಮಹಾರಾಷ್ಟ್ರ ಕಂಟಕ ಕಾಡಿತ್ತು. ಇದೀಗ ಮೂರನೇ ಅಲೆಯ ಅಬ್ಬರ ಶುರುವಾಗುತ್ತಿದ್ದಂತೆ ತಮಿಳುನಾಡು ಪ್ರವಾಸ ಮುಗಿಸಿ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕ ಸೃಷ್ಟಿಸಿದೆ.

ಇತ್ತೀಚೆಗೆ ತಮಿಳುನಾಡಿನ ಓಂ ಶಕ್ತಿ ದೇವಾಯಕ್ಕೆ ಹೋಗಿ ಬಂದವರಲ್ಲಿ ಸೋಂಕು ದೃಢಪಡುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಮಂಡ್ಯ ಜಿಲ್ಲೆಯ ಹಲವಾರು ಹಳ್ಳಿಗಳಿಂದ ಈವರೆಗೆ ಸುಮಾರು 3600 ಮಂದಿ ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದು, ಎಲ್ಲರಿಗೂ ಕರೊನಾ ಟೆಸ್ಟ್​ಗೆ ಒಳಪಡಿಸಿದಾಗ 89 ಮಂದಿಗೆ ಸೋಂಕು ವಕ್ಕರಿಸಿದೆ. ಇದು ಜನರನ್ನು ನಿದ್ದೆಗೆಡಿಸುವಂತೆ ಮಾಡಿದೆ.

ಇನ್ನು ಯಾತ್ರೆ ಮುಗಿಸಿ ಬಂದವರಿಗೆ ಕರೊನಾ ದೃಢಪಡುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ನೆಗೆಟಿವ್ ಬಂದವರಿಗೂ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರೆಲ್ಲರಿಗೂ 7 ದಿನದ ಬಳಿಕ ಮತ್ತೊಮ್ಮೆ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಇನ್ನು ನಾಳೆ ಮತ್ತೆ 803 ಮಂದಿ ಮಂಡ್ಯಕ್ಕೆ ವಾಪಸ್ಸಾಗಲಿದ್ದು, ಅವರಿಗೆ ಪರೀಕ್ಷೆಗೊಳಪಡಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಡಿಸಿ ಎಸ್.ಅಶ್ವಥಿ ನೇತೃತ್ವದಲ್ಲಿ ತುರ್ತು ಸಭೆ

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಜಿಲ್ಲಾಮಟ್ಟದ ಅಧಿಕಾರ ತುರ್ತು ಸಭೆ ನಡೆಸಿದ್ದಾರೆ. ಹೊರ ರಾಜ್ಯಗಳಿಗೆ ಪ್ರವಾಸಕ್ಕೆ ತೆರಳಲು ಬಸ್ ಬುಕಿಂಗ್ ಮಾಡಿಕೊಂಡಿದ್ರೆ ಕೂಡಲೇ ಬುಕಿಂಗ್ ರದ್ದು ಮಾಡುವಂತೆ ಕೆಎಸ್ಆರ್ ಟಿಸಿ ಅಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ ಮೂರನೇ ಅಲೆ ಎದುರಿಸಲು ಪ್ರತೀ ತಾಲ್ಲೂಕಿನಲ್ಲಿ ಕ್ವಾರಂಟೈನ್ ಕೇಂದ್ರ ಹಾಗೂ ಐಸೊಲೇಷನ್ ಸೆಂಟರ್ ತೆರೆಯಲು ತಹಸೀಲ್ದಾರಿಗಳಿಗೆ ಸೂಚಿಸಿದ್ದಾರೆ.

ಮಾಸ್ಕ್ ಹಾಕಿಕೊಳ್ಳದೇ ಬೇಜವಾಬ್ದಾರಿ ತೋರುವ ಜನರಿಗೆ ದಂಡ ಹಾಕಲು ಆದೇಶ ನೀಡಿದರು.

ಒಟ್ಟಾರೆ ಮಂಡ್ಯ ಜಿಲ್ಲೆಗೆ ಓಂ ಶಕ್ತಿ ಕಂಟಕವಾಗಿದ್ದು, ಜಿಲ್ಲಾಡಳಿತ ಸತಾಯಗತಾಯ ಕೋವಿಡ್ ಆರ್ಭಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು, ಓಂ ಶಕ್ತಿ ಭಕ್ತರು ಕೈ ಜೋಡಿಸಿದ್ರೆ ಮಾತ್ರ ಸೋಂಕು ನಿಯಂತ್ರಣದಲ್ಲಿ ಯಶಸ್ವಿಯಾಗಲು ಸಾಧ್ಯ.

144 ಸೆಕ್ಷನ್ ಘೋಷಣೆ

ಕೊರೊನಾ ನಾಗಾಲೋಟಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಜಿಲ್ಲೆಯಾದ್ಯಂತ ಮುಂಜಾಗ್ರತ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದೆ. ಜ-19 ರವರೆಗೆ ‌ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಮದುವೆ ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಅವಕಾಶ ನೀಡಿದ್ದು, ಅಂತ್ಯ ಸಂಸ್ಕಾರ, ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಅವಕಾಶ ನೀಡಿದೆ. ದೇವರ ದರ್ಶನಕ್ಕೆ 50 ಜನರಿಗೆ ಅವಕಾಶ ನೀಡಲಾಗಿದ್ದು, ಪಬ್, ಬಾರ್, ಜಿಮ್, ಹೋಟೇಲ್, ಚಿತ್ರಮಂದಿರ, ಈಜುಕೊಳ, ಸ್ಟೋರ್ಟ್ಸ್​ಗೆ ಕ್ಕೆ ಶೇ 50% ರಷ್ಟಿಗೆ ಅವಕಾಶ ನೀಡಲಾಗಿದೆ. ವಾರಾಂತ್ಯದಲ್ಲಿ ದೇವಾಲಯ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಲಾಗಿದೆ.

ಇನ್ನು ಪ್ರತಿಭಟನೆ, ರ್ಯಾಲಿ, ಧರಣಿ ನಿಷೇಧ ಹೇರಿದ್ದು, ವಾರಾಂತ್ಯ ಕರ್ಫ್ಯೂ ಹೇರಿ ಶುಕ್ರವಾರ ರಾತ್ರಿ10 ಗಂಟೆಯಿಂದ ಸೋಮವಾರ ಮುಂಜಾನೆ 5ರ ವರೆಗೆ ನಿರ್ಬಂಧ ಹೇರಿದೆ. ಇನ್ನು ಕೊರೊನಾ ನಿಯಮ ಉಲ್ಲಂಘಿಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಹೇಗಿರಲಿದೆ?

ABOUT THE AUTHOR

...view details