ಮಂಡ್ಯ: ಕೊಂಡ ಹಾಯಲು ಹೋದ ಪೂಜಾರಿ ಕೊಂಡಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ದೇವತೆ ಹಬ್ಬದ ನಿಮಿತ್ತ ಇಂದು ಕೊಂಡಹಾಯಲು ಹೋಗಿದ್ದ ಪೂಜಾರಿ ಆಯತಪ್ಪಿ ಕೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಜಿಲ್ಲೆಯಲ್ಲಿ ಈ ಹಿಂದೆಯು ಕೊಂಡಕ್ಕೆ ಬಿದ್ದಿರುವ ಹಲವಾರು ಪ್ರಕರಣಗಳಿದ್ದು, ಈಗಲೂ ಕೂಡ ಮುಂದುವರೆದಿದೆ. ಇಂದು ಬೆಳಗ್ಗೆ ಕೊಂಡಕ್ಕೆ ಬಿದ್ದು ಗಾಯಗೊಂಡ ಅರ್ಚಕನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.