ಕರ್ನಾಟಕ

karnataka

ETV Bharat / state

ಜೀತಪದ್ಧತಿ ವಿರುದ್ಧ ಧ್ವನಿ ಎತ್ತಿದ್ದೇ ತಪ್ಪಾಯ್ತಾ..? ವ್ಯಕ್ತಿ ಮೇಲೆ ಮಹಿಳೆಯರಿಂದಲೇ ಹಲ್ಲೆ - ಮದ್ದೂರು ತಾಲೂಕಿನ ಚಿಕ್ಕಮರೀಗೌಡನ ದೊಡ್ಡಿ

ತಮ್ಮ ಗ್ರಾಮದಲ್ಲಿ ಜೀತ ಪ್ರಕರಣ ಜೀವಂತವಾಗಿದೆ ಎಂದು ಮುತ್ತೇಶ್, ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ಹೇಳಲಾಗಿದೆ. ಈ ವಿಚಾರವಾಗಿ ಗ್ರಾಮದಲ್ಲಿ ಸಾಮರಸ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರೆಲ್ಲ ಸೇರಿ ಹಲ್ಲೆ ಮಾಡಿದ್ದಾರೆ.

ವ್ಯಕ್ತಿ ಮೇಲೆ ಮಹಿಳೆಯರಿಂದ ಹಲ್ಲೆ

By

Published : Sep 13, 2019, 12:02 PM IST

ಮಂಡ್ಯ: ಜೀತ ಪದ್ಧತಿಯ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವ್ಯಕ್ತಿಯ ಮೇಲೆ ಮಹಿಳೆಯರು ಹಲ್ಲೆ ಮಾಡಿದ ಘಟನೆ ಮದ್ದೂರು ತಾಲೂಕಿನ ಚಿಕ್ಕಮರೀಗೌಡನ ದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಮುತ್ತೇಶ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ತಮ್ಮ ಗ್ರಾಮದಲ್ಲಿ ಜೀತ ಪ್ರಕರಣ ಜೀವಂತವಾಗಿದೆ ಎಂದು ಮುತ್ತೇಶ್, ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ಹೇಳಲಾಗಿದೆ. ಈ ವಿಚಾರವಾಗಿ ಗ್ರಾಮದಲ್ಲಿ ಸಾಮರಸ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರು ಹಲ್ಲೆ ಮಾಡಿದ್ದಾರೆ.

ವ್ಯಕ್ತಿ ಮೇಲೆ ಮಹಿಳೆಯರಿಂದ ಹಲ್ಲೆ

ಅಧಿಕಾರಿಗಳು ದೂರಿನ ಅನ್ವಯ ವಿಚಾರಣೆ ಮಾಡಲು ಗ್ರಾಮಕ್ಕೆ ಆಗಮಿಸಿದ ವೇಳೆ, ಮಹಿಳೆಯರೇ ಮುತ್ತೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೆ.ಎಂ. ದೊಡ್ಡಿ ಪೊಲೀಸರಿಗೆ ದೂರು ನೀಡಿರುವ ಮುತ್ತೇಶ್, ತನಿಖೆ ನಡೆಬೇಕು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details