ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ.
ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ:ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. ಇದರಿಂದ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದರು. ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
(ಓದಿ: ನಾಗರಹೊಳೆಯಲ್ಲಿ ಗಾಯಗೊಂಡ ಆನೆ ಮರಿ ಕಂಡ ರಾಹುಲ್: ಚಿಕಿತ್ಸೆ ಕೊಡಿಸುವಂತೆ ಸಿಎಂಗೆ ಪತ್ರ)