ಕರ್ನಾಟಕ

karnataka

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್

By

Published : Oct 19, 2019, 6:13 AM IST

ಮಂಡ್ಯದ ಕೆ. ಆರ್​​. ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಬೈಕ್‌ಗಳ ಮುಖಾಮುಖಿ ಡಿಕ್ಕಿ

ಮಂಡ್ಯ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಪತಿ ಜೊತೆ ಪ್ರಯಾಣಿಸುತ್ತಿದ್ದ ಸುಲೋಚನಾ (25) ಹಾಗೂ ಮತ್ತೊಂದು ಬೈಕಿನ ಸವಾರ ಕುಮಾರ್(30) ಸಾವಿಗೀಡಾಗಿದ್ದಾರೆ.

ಬೈಕ್‌ಗಳ ಮುಖಾಮುಖಿ ಡಿಕ್ಕಿ

ಬೈಕ್ ಅಪಘಾತದ ವೇಳೆ ಸುಲೋಚನಾ ಆಯತಪ್ಪಿ ಬಿದ್ದಾಗ ಅವರ ಮೇಲೆ ಟಿಪ್ಪರ್ ಹರಿದು ಸಾವಿಗೀಡಾಗಿದ್ದಾರೆ. ಕುಮಾರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ. ಸುಲೋಚನ ಪತಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ABOUT THE AUTHOR

...view details