ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ನಿನ್ನೆ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯ ಜೀವನೋಪಾಯ ವರ್ಷದ ಉದ್ಘಾಟನೆ ಮತ್ತು ಸಾಮರ್ಥ್ಯ ಮಳಿಗೆ ಲೋಕಾರ್ಪಣೆ ಕಾರ್ಯಕ್ರಮ ಸುಮಾರು ಎರಡು ಗಂಟೆ ತಡವಾಗಿ ಆರಂಭಗೊಂಡಿತು. ಅಷ್ಟು ಮಾತ್ರವಲ್ಲದೇ ಸಚಿವರು ಸುದೀರ್ಘ ಭಾಷಣ ಮಾಡಿದ್ದರಿಂದ ಬೇಸತ್ತ ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುತ್ತಿದ್ದಂತೆ ಜಾಗ ಖಾಲಿ ಮಾಡಿ ತೆರಳಲಾರಂಭಿಸಿದರು. ಅದಾಗ್ಯೂ ಸಿಎಂ ಬೊಮ್ಮಾಯಿ ಜನರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಆರಂಭವಾಗಿತ್ತು. ಸಚಿವ ಅಶ್ವತ್ಥನಾರಾಯಣ ಅವರು ಸುದೀರ್ಘ ಭಾಷಣ ಮಾಡಿ ಸರ್ಕಾರದ ಯೋಜನೆಗಳು ಮತ್ತು ಮುಖ್ಯಮಂತ್ರಿಗಳನ್ನ ಗುಣಗಾನ ಮಾಡಿದರು. ಅಷ್ಟರಲ್ಲೇ ಒಂದಿಷ್ಟು ಮಂದಿ ಜಾಗ ಖಾಲಿ ಮಾಡಿದ್ದರು. ನಂತರ ಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿದ್ದಂತೆ ಉಳಿದ ಜನರೂ ತೆರಳಲಾರಂಭಿಸಿದರು.