ಕರ್ನಾಟಕ

karnataka

By

Published : Dec 9, 2020, 3:15 PM IST

ETV Bharat / state

ಮಂಡ್ಯ ಗ್ರಾಪಂ ಸದಸ್ಯ ಸ್ಥಾನಗಳ ಹರಾಜಿನಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ದೂರು

ಗ್ರಾಪಂ ಸದಸ್ಯ ಸ್ಥಾನಗಳಿಗೆ ಹರಾಜು ಹಾಕಿದ್ದ ಮಾಹಿತಿ ತಿಳಿದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಹಿನ್ನೆಲೆ, ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್, ಹರಾಜಿನಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ದೂರು ದಾಖಲಿಸಿದ್ದಾರೆ..

ಮಂಡ್ಯ ಗ್ರಾ.ಪಂ
ಮಂಡ್ಯ ಗ್ರಾ.ಪಂ

ಮಂಡ್ಯ :ನಾಗಮಂಗಲ ತಾಲೂಕು ಲಾಳನಕೆರೆ ಗ್ರಾಮ ಪಂಚಾಯತ್‌ನ ಮೂರು ಸದಸ್ಯ ಸ್ಥಾನಗಳಿಗೆ‌ ಹರಾಜು ಹಾಕಿದ್ದ ಆರೋಪದಡಿ ಬಿದರಕೆರೆ ಗ್ರಾಮಸ್ಥರ ವಿರುದ್ಧ ತಹಶೀಲ್ದಾರ್ ದೂರು ದಾಖಲಿಸಿದ್ದಾರೆ.

ಗ್ರಾಪಂ ಸದಸ್ಯ ಸ್ಥಾನಗಳಿಗೆ ಹರಾಜು ಹಾಕಿದ್ದ ಮಾಹಿತಿ ತಿಳಿದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಹಿನ್ನೆಲೆ, ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಹರಾಜಿನಲ್ಲಿ ಪಾಲ್ಗೊಂಡಿದ್ದವರ ಕುರಿತು ತನಿಖೆ ನಡೆಸಿದ್ದಾರೆ.

ಹರಾಜಿನಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ದೂರು ದಾಖಲು
ಹರಾಜಿನಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ದೂರು ದಾಖಲು

ಇದನ್ನೂ ಓದಿ.. ಮಂಡ್ಯದಲ್ಲೂ ಗ್ರಾ.ಪಂ. ಸದಸ್ಯತ್ವ ಹರಾಜು - ವಿಡಿಯೋ ವೈರಲ್

ಈ ಸಂಬಂಧ ಗ್ರಾಮದ ಹತ್ತು ಜನರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿರುವ ನಾಗಮಂಗಲ ತಹಶೀಲ್ದಾರ್ ಅವರು, ಈ ಬಗ್ಗೆ ಸಂಪೂರ್ಣ ವರದಿಯನ್ನ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.

ABOUT THE AUTHOR

...view details