ಕರ್ನಾಟಕ

karnataka

ETV Bharat / state

ಪಕ್ಷದ ಶಿಸ್ತಿಗೆ ವಿರುದ್ಧ ನಡೆದರೆ ಕಠಿಣ ಕ್ರಮ - ಪರಮೇಶ್ವರ್‌ ಚಾಟಿ - undefined

ಮಂಡ್ಯ ಜಿಲ್ಲೆಯ ಕೈ ಬಂಡಾಯಗಾರರಿಗೆ ಕಾಂಗ್ರೆಸ್ ಬಾಗಿಲು ಮುಚ್ಚಲಿದೆಯೇ? ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕ್ಷೇತ್ರದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಡಾ. ಜಿ.ಪರಮೇಶ್ವರ್

By

Published : Apr 14, 2019, 5:47 PM IST

ಮಂಡ್ಯ:ಮೈತ್ರಿ ಧರ್ಮ ಪಾಲಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ನರೇಂದ್ರ ಸ್ವಾಮಿ ಹಾಗು ಚೆಲುವರಾಯಸ್ವಾಮಿ ವಿರುದ್ಧ ಉಚ್ಛಾಟನೆಗೆ ಕಾರ್ಯಕರ್ತರ ಒತ್ತಡ ಹೆಚ್ಚುತ್ತಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಇಂದು ಎಸ್‌ಸಿ/ಎಸ್‌ಟಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ.ಪರಮೇಶ್ವರ್,ಹೈಕಮಾಂಡ್ ಆದೇಶದಂತೆ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನ ಬೆಂಬಲಿಸಬೇಕು. ಇಲ್ಲವಾದಲ್ಲಿ ಪಕ್ಷ ಕಠಿಣ ಕ್ರಮ ಕೈಗೊಳ್ಳಲಿದೆ ಎಂದುಬಂಡಾಯ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಡಾ. ಜಿ.ಪರಮೇಶ್ವರ್

ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಾರ್ಯಕರ್ತರು ಬೆಂಬಲಿಸಬೇಕು. ಒಂದು ವೇಳೆ ಮುಖಂಡರು ಪಕ್ಷದ ನಡೆಯ ವಿರುದ್ಧ ನಡೆದರೆ, ಯಾರೇ ಆದರೂ ಪಕ್ಷ ಅವರನ್ನ ಕ್ಷಮಿಸೋದಿಲ್ಲ ಎಂದು ಕಡಕ್‌ ಆಗಿ ವಾರ್ನ್ ಮಾಡಿದರು.

ಇದೇ ವೇಳೆ ಸಭೆಯಲ್ಲಿ ಮಾಜಿ ಸಚಿವರಾದ ನರೇಂದ್ರ ಸ್ವಾಮಿ ಹಾಗು ಚಲುವರಾಯಸ್ವಾಮಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹ ಕೇಳಿಬಂತು.

For All Latest Updates

TAGGED:

ABOUT THE AUTHOR

...view details