ಮಂಡ್ಯ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮತ್ತು ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಆಗಮಿಸುತ್ತಿದ್ದು, ಅವರ ಸಂಚಾರಕ್ಕೆ ಮಂಡ್ಯ ವಿಶ್ವವಿದ್ಯಾಲಯ ಆವರಣದ ಗೋಡೆ ಕೆಡವಲಾಗಿದೆ. ಮಂಡ್ಯ ಜಿಲ್ಲಾಡಳಿತದ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ವಿವಿ ಆವರಣದಲ್ಲಿ ಜೀವನೋಪಾಯ ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಆಗಮಿಸಲಿದ್ದು, ಈ ಕಾರಣದಿಂದ ಮಂಡ್ಯ ವಿವಿ ಆವರಣದ ಗೋಡೆ ಕೆಡವಲಾಗಿದೆ. ವಿವಿಐಪಿ ಸಂಸ್ಕೃತಿಗೆ ಪದೇ ಪದೆ ಕಾಲೇಜು ಆವರಣವನ್ನು ಕೆಡವಲಾಗಿದ್ದು, ಈ ಹಿಂದೆಯೂ ಹಲವು ಬಾರಿ ಸಿದ್ದರಾಮಯ್ಯ, ಹೆಚ್ಡಿಕೆ ಸಿಎಂ ಆಗಿದ್ದಾಗಲೂ ಆವರಣ ಕೆಡವಲಾಗಿತ್ತು.