ಮಂಡ್ಯ:ನನ್ನ ರಾಜಕೀಯ ಜೀವನದಲ್ಲೇ ನಾನು ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಟ್ಟವನಲ್ಲ. ಈಗ ಸಚಿವ ನಾರಾಯಣ ಗೌಡ ಅವರು ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾನಾಡುತ್ತಾರೆ ಎಂದು ಸಚಿವ ನಾರಾಯಣ ಗೌಡ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಅತೀ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಜಿಲ್ಲೆ ಎಂದರೆ ಅದು ಮಂಡ್ಯ, ಎನ್ಒಸಿ ಕೊಡಲು ಇಲ್ಲಿ 10 ಲಕ್ಷ ಫಿಕ್ಸ್ ಮಾಡಿಕೊಂಡಿದ್ದಾರೆ. 10 ಲಕ್ಷ ರೂಪಾಯಿ ದುಡ್ಡು ಎಲ್ಲಿ ಹೋಗುತ್ತಿದೆ ಎಂಬುದರ ಬಗ್ಗೆ ಸತ್ಯ ಹೇಳಬೇಕು ಎಂದು ಆಗ್ರಹಿಸಿದ್ರು. ಮಂತ್ರಿಯಾಗಿ ಜಿಲ್ಲೆಯ ಆಸ್ತಿಯನ್ನು ಉಳಿಸಬೇಕು. ಈಗ ಬಂದು ಹೇಳಿಕೆ ಕೊಟ್ಟು ರೇಟ್ ಜಾಸ್ತಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೆಚ್ಡಿಕೆ ವ್ಯಂಗ್ಯವಾಡಿದರು.
ಬೆಳಗಾವಿಯಲ್ಲಿ ಮರಾಠರ ಉದ್ಧಟತನ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿಗೆ ಸಂಬಂಧಿಸಿದಂತೆ ಗಡಸು ನಿರ್ಧಾರ ತೆಗೆದುಕೊಳ್ಳಿ ಅಂತಾ ರಾಜ್ಯ ಸರ್ಕಾರಕ್ಕೆ ಹೇಳಿದ್ದೇನೆ. ಆದರೆ ಮರಾಠಿಗರನ್ನು ಮೆಚ್ಚಿಸಿಕೊಳ್ಳುವ ಸಲುವಾಗಿ ಸರ್ಕಾರ ಗಡಸು ನಿರ್ಧಾರ ಮಾಡುತ್ತಿಲ್ಲ ಎಂದು ಕಿಡಿಕಾರಿದರು.