ಮಂಡ್ಯ:ಬೆಳೆ ಪರಿಹಾರ ಕೇಳಿದ್ದಕ್ಕೆ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಅಂತಾ ನೊಂದ ರೈತ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕ ಸೋಮನಹಳ್ಳಿಯಲ್ಲಿ ನಡೆದಿದೆ.
ಪರಿಹಾರ ಕೇಳಿದ್ದಕ್ಕಾಗಿ ಅಧಿಕಾರಿಗಳಿಂದ ಧಮ್ಕಿ ಆರೋಪ: ವಿದ್ಯುತ್ ಕಂಬ ಏರಿ ಕುಳಿತ ರೈತ! - ‘armer trying to commit suicide in Chikkasomanahalli in Mandya
ಬೆಳೆ ಪರಿಹಾರ ಕೇಳಿದ್ದಕ್ಕೆ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಅಂತಾ ನೊಂದ ರೈತ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕ ಸೋಮನಹಳ್ಳಿಯಲ್ಲಿ ನಡೆದಿದೆ.
![ಪರಿಹಾರ ಕೇಳಿದ್ದಕ್ಕಾಗಿ ಅಧಿಕಾರಿಗಳಿಂದ ಧಮ್ಕಿ ಆರೋಪ: ವಿದ್ಯುತ್ ಕಂಬ ಏರಿ ಕುಳಿತ ರೈತ! farmer attempted suicide in Mandya](https://etvbharatimages.akamaized.net/etvbharat/prod-images/768-512-5346247-thumbnail-3x2-hrs.jpg)
ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ರೈತ
ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ರೈತ
ಕುಮಾರ್, ವಿದ್ಯುತ್ ಕಂಬ ಏರಿದ ಆತ್ಮಹತ್ಯೆಗೆ ಯತ್ನಿಸಿದ ರೈತ. ಕುಮಾರ್ ಸೂಕ್ತ ಬೆಳೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದನಂತೆ. ಆದರೆ ಪರಿಹಾರದ ನೀಡಬೇಕಾದ ಅಧಿಕಾರಿಗಳು ಪೊಲೀಸರಿಂದ ಧಮ್ಕಿ ಹಾಕಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದ ಬೇಸತ್ತ ಕುಮಾರ್, ತನ್ನ ಜಮೀನಿನಲ್ಲಿರುವ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಮಾರ್ ಮನವೊಲಿಕೆಗೆ ಸ್ಥಳೀಯರು ಎಷ್ಟೇ ಪ್ರಯತ್ನಪಟ್ಟರು ವಿದ್ಯುತ್ ಕಂಬದಿಂದ ಕೆಳಗಿಳಿದಿಲ್ಲ. ಆದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.