ಕರ್ನಾಟಕ

karnataka

ETV Bharat / state

'ಕಾವೇರಿ'ದ ಪ್ರತಿಭಟನೆ: ರಸ್ತೆ ತಡೆದು ರೈತರ ಆಕ್ರೋಶ

ಕಾವೇರಿ ಪ್ರಾಧಿಕಾರದಿಂದ ಕೂಡಲೇ ನೀರು ಬಿಡಬೇಕು ಎಂಬ ಆದೇಶವನ್ನು ತಕ್ಷಣವೇ ಕೈ ಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮದ್ದೂರಿನ‌ ಕೊಪ್ಪ ವೃತ್ತದ ಬಳಿ ಪ್ರತಿಭಟನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು.

By

Published : May 30, 2019, 8:37 AM IST

ಕಾವೇರಿ ನೀರಿಗಾಗಿ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ: ಕಾವೇರಿ ನದಿನೀರು ಪ್ರಾಧಿಕಾರದಿಂದ ತಮಿಳುನಾಡಿಗೆ ನೀರು ಬಿಡಲು ಆದೇಶ ಬಂದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಕಾವೇರಿ ನೀರಿಗಾಗಿ ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

ಮದ್ದೂರಿನ‌ ಕೊಪ್ಪ ವೃತ್ತದ ಬಳಿ‌ ರಸ್ತೆ ತಡೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಕಾವೇರಿ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿದರು.

ತಮಿಳುನಾಡಿಗೆ ಕೂಡಲೇ ನೀರು ಬಿಡಬೇಕು ಎಂಬ ಆದೇಶವನ್ನು ತಕ್ಷಣವೇ ಕೈ ಬಿಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತರ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಸವಾರರು ಪರದಾಟ ಅನುಭವಿಸಿದ್ದಾರೆ.

For All Latest Updates

ABOUT THE AUTHOR

...view details