ಮಂಡ್ಯ: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಚಿರತೆ ಸೆರೆ ವಿಚಾರ ತಿಳಿದು ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಮಂಡ್ಯದಲ್ಲಿ ಬೋನಿಗೆ ಬಿತ್ತು ಹೆಣ್ಣು ಚಿರತೆ; ನಿರಾಳರಾದ ರೈತರು
ಯಡಗನಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಇರಿಸಿದ್ದ ಬೋನಿಗೆ ಬಿದ್ದು ಚಿರತೆ ಸೆರೆಯಾಗಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಚಿರತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ನಾಯಿ ತಿನ್ನಲು ಬಂದು ಸೆರೆಯಾಗಿದೆ.
ಹೆಣ್ಣು ಚಿರತೆ
ಜಿಲ್ಲೆಯ ಮದ್ದೂರು ತಾಲೂಕಿನ ಯಡಗನಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಇರಿಸಿದ್ದ ಬೋನಿಗೆ ಬಿದ್ದು ಚಿರತೆ ಸೆರೆಯಾಗಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಚಿರತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ನಾಯಿ ತಿನ್ನಲು ಬಂದು ಸೆರೆಯಾಗಿದೆ.
ಇನ್ನು ಸೆರೆಯಾದ ಚಿರತೆಯನ್ನು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯಧಿಕಾರಿ ತಿಳಿಸಿದ್ದಾರೆ.